ನವದೆಹಲಿ: 1975ರಲ್ಲಿ ಮಾಜಿ ಪ್ರಧಾನಿ ಇಂದಿರಾ ಗಾಂಧಿಯವರು ತುರ್ತುಪರಿಸ್ಥಿತಿಯನ್ನು ಹೇರಿದ ಕರಾಳ ದಿನ ಇಂದು. ಪ್ರಜಾಪ್ರಭುತ್ವದ ಮೇಲೆ ನಡೆದ ಅಮಾನುಷ ದಾಳಿಯನ್ನು ಇಡೀ ರಾಷ್ಟ್ರ ಇಂದು ಸ್ಮರಿಸುತ್ತಿದೆ
ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 1975 ರಲ್ಲಿ ತುರ್ತು ಪರಿಸ್ಥಿತಿ ಹೇರಿದ್ದು ಇತಿಹಾಸದ ಕರಾಳ ಅಧ್ಯಾಯ ಎಂದು ಬಣ್ಣಿಸಿದ್ದಾರೆ.
1975ರಲ್ಲಿ ಇದೇ ದಿನ ಕಾಂಗ್ರೆಸ್ ತುರ್ತುಪರಿಸ್ಥಿತಿ ಹೇರುವ ಮೂಲಕ ಪ್ರತಿಯೊಬ್ಬ ಭಾರತೀಯನ ಸಾಂವಿಧಾನಿಕ ಹಕ್ಕುಗಳನ್ನು ಕಸಿದುಕೊಂಡಿತು ಎಂದು ಟ್ವೀಟ್ ಮಾಡಿದ್ದಾರೆ.
1975 में आज ही के दिन कांग्रेस ने सत्तामोह में रातो-रात हर भारतीय के संवैधानिक अधिकारों को छीन आपातकाल थोपा व निर्दयता में विदेशी शासन को भी पीछे छोड़ दिया।
इस तानाशाही मानसिकता के विरुद्ध लोकतंत्र की पुनर्स्थापना के महायज्ञ में अपना सर्वस्व अर्पण करने वाले सभी देशभक्तों को नमन। pic.twitter.com/ErYCkrPqp3
— Amit Shah (@AmitShah) June 25, 2022
ಈ ಸರ್ವಾಧಿಕಾರಿ ಧೋರಣೆಯ ವಿರುದ್ಧ ಪ್ರಜಾಪ್ರಭುತ್ವದ ಮರುಸ್ಥಾಪನೆಗಾಗಿ ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟವರಿಗೆ ನಮನ ಸಲ್ಲಿಸಿದರು.
47 ವರ್ಷಗಳ ಹಿಂದೆ ದೇಶದಲ್ಲಿ ತುರ್ತು ಪರಿಸ್ಥಿತಿ ಹೇರಿದ್ದನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ರಾಜನಾಥ್ ಸಿಂಗ್ ಟ್ವೀಟ್ ಮಾಡಿದ್ದಾರೆ. ಪ್ರಜಾಪ್ರಭುತ್ವದ ರಕ್ಷಣೆಗೆ ಜನರು ತಮ್ಮನ್ನು ಸಮರ್ಪಿಸಿಕೊಳ್ಳಬೇಕು ಮತ್ತು ಸಂವಿಧಾನ ಮತ್ತು ಸಂಸ್ಥೆಗಳ ಘನತೆಯನ್ನು ಕಾಪಾಡುವ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.
आज से ४७ साल पहले भारत में आपातकाल का लागू होना, इस देश के इतिहास का ऐसा काला अध्याय है, जिसे कभी भूला नहीं जा सकता।
आज के दिन सभी भारतवासियों को लोकतंत्र की रक्षा के प्रति न केवल स्वयं को समर्पित करना चाहिए बल्कि संविधान और संस्थाओं की गरिमा बनाए रखने का भी संकल्प लेना चाहिए।
— Rajnath Singh (@rajnathsingh) June 25, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.