ಮುಂಬಯಿ: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ ಅವರನ್ನು ಗುಜರಾತ್ ಪೊಲೀಸ್ನ ಭಯೋತ್ಪಾದನಾ ನಿಗ್ರಹ ದಳವು ಇಂದು ಮುಂಬೈನಲ್ಲಿ ಬಂಧನಕ್ಕೊಳಪಡಿಸಿದೆ.
ಮಧ್ಯಾಹ್ನ 3 ಗಂಟೆಗೆ ಮುಂಬೈನ ಜುಹು ಪ್ರದೇಶದಲ್ಲಿರುವ ಅವರ ಮನೆಯಿಂದ ಅವರನ್ನು ಬಂಧಿಸಲಾಯಿತು. ವರದಿಗಳ ಪ್ರಕಾರ, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 468 ರ ಅಡಿಯಲ್ಲಿ ತೀಸ್ತಾ ಸೆಟಲ್ವಾಡ್ ಮತ್ತು ಇತರರ ವಿರುದ್ಧ ಎಫ್ಐಆರ್ ದಾಖಲಿಸಿದ ನಂತರ ವಶಕ್ಕೆ ತೆಗೆದುಕೊಳ್ಳಲಾಗಿದೆ.
ವರದಿಯ ಪ್ರಕಾರ ಪೊಲೀಸರು ಇವರನ್ನು ವಿಚಾರಣೆಗಾಗಿ ಅಹಮದಾಬಾದ್ಗೆ ಕರೆದೊಯ್ಯಲು ಬಯಸುತ್ತಿದ್ದಾರೆ.
ಪ್ರಸ್ತುತ, ತೀಸ್ತಾ ಸೆಟಲ್ವಾಡ್ ಅವರನ್ನು ವಿಚಾರಣೆಗಾಗಿ ಸಾಂತಾಕ್ರೂಜ್ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ.
ಗೋಧ್ರಾ ಗಲಭೆಯಲ್ಲಿ ಸಂತ್ರಸ್ತರಾದವರಿಗೆ ಬೆಂಬಲ ನೀಡುವ ಸೋಗಿನಲ್ಲಿ ತೀಸ್ತಾ ಸಾಕಷ್ಟು ಅಕ್ರಮ ಎಸಗಿದ್ದಾರೆ ಎಂಬ ಆರೋಪ ಇದೆ.
ಪ್ರಧಾನಿ ನರೇಂದ್ರ ಮೋದಿ ಅವರ ಖುಲಾಸೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂಕೋರ್ಟ್ ಶುಕ್ರವಾರ ವಜಾಗೊಳಿಸಿದ ನಂತರ ಅವರ ಬಂಧನವಾಗಿದೆ. ಸೆಟ್ಲವಾಡ್ ಈ ಪ್ರಕರಣದಲ್ಲಿ ಸಹ ಅರ್ಜಿದಾರರಾಗಿದ್ದರು. ಗಲಭೆಯಲ್ಲಿ ಕೊಲ್ಲಲ್ಪಟ್ಟ ಕಾಂಗ್ರೆಸ್ ಸಂಸದ ಎಹ್ಸಾನ್ ಜಾಫ್ರಿ ಅವರ ಪತ್ನಿ ಝಕಿಯಾ ಜಾಫ್ರಿ ಪ್ರಮುಖ ಅರ್ಜಿದಾರರಾಗಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.