ನವದೆಹಲಿ: ಅಗ್ನಿಪಥ್ ಮತ್ತು ನೂಪುರ್ ಶರ್ಮಾ ವಿವಾದದ ಹಿಂಸಾಚಾರಕ್ಕಾಗಿ ಉತ್ತರಪ್ರದೇಶದಲ್ಲಿ 2,000 ಜನರನ್ನು ಬಂಧಿಸಲಾಗಿದೆ.
ಅಗ್ನಿಪಥ್ ಸೇನಾ ನೇಮಕಾತಿ ಯೋಜನೆಯ ವಿರುದ್ಧ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಇದುವರೆಗೆ 1,562 ಜನರನ್ನು ಬಂಧಿಸಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ.
ಪ್ರವಾದಿ ಮೊಹಮ್ಮದ್ ವಿರುದ್ಧದ ವಿವಾದಾತ್ಮಕ ಹೇಳಿಕೆಯ ಹಿಂಸಾಚಾರಕ್ಕೆ ಸಂಬಂಧಿಸಿದಂತೆ 424 ಜನರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ಶನಿವಾರ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ , “ಅಗ್ನಿಪಥ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ 1,562 ಜನರನ್ನು ಬಂಧಿಸಲಾಗಿದೆ. ಇವರಲ್ಲಿ 535 ಮಂದಿಯನ್ನು ಜಾನ್ಪುರದಲ್ಲಿ, 222 ಮಂದಿಯನ್ನು ಬಲ್ಲಿಯಾದಲ್ಲಿ ಮತ್ತು 210 ಮಂದಿಯನ್ನು ಚಂದೌಲಿಯಲ್ಲಿ ಬಂಧಿಸಲಾಗಿದೆ. ಈ ಸಂಬಂಧ 29 ಜಿಲ್ಲೆಗಳಲ್ಲಿ ಎಂಬತ್ತೆರಡು ಪ್ರಕರಣಗಳು ದಾಖಲಾಗಿವೆ. ಜೂನ್ 17 ರಂದು, ಸಶಸ್ತ್ರ ಪಡೆಗಳಿಗೆ ಸೇರಲು ಬಯಸುವ ಯುವಕರು ಬಲ್ಲಿಯಾ, ವಾರಣಾಸಿ, ಆಗ್ರಾ ಮತ್ತು ಅಲಿಗಢ ಸೇರಿದಂತೆ ವಿವಿಧ ಸ್ಥಳಗಳಲ್ಲಿ ಹಿಂಸಾತ್ಮಕ ಪ್ರತಿಭಟನೆಗಳನ್ನು ನಡೆಸಿದರು” ಎಂದಿದ್ದಾರೆ.
ನೂಪುರ್ ಶರ್ಮಾ ಅವರು ಪ್ರವಾದಿಯವರ ಕುರಿತು ಮಾಡಿದ ಹೇಳಿಕೆಗೆ ಸಂಬಂಧಿಸಿದಂತೆ ಜೂನ್ 3 ಮತ್ತು ಜೂನ್ 10 ರಂದು ಭುಗಿಲೆದ್ದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ, ಕಾನ್ಪುರ, ಫಿರೋಜಾಬಾದ್, ಅಲಿಗಢ, ಹತ್ರಾಸ್, ಮೊರಾದಾಬಾದ್, ಅಂಬೇಡ್ಕರ್ ನಗರ 10 ಜಿಲ್ಲೆಗಳಲ್ಲಿ 424 ಜನರನ್ನು ಬಂಧಿಸಲಾಗಿದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.