ಮುಂಬಯಿ: ಶಿವಸೇನೆ ನಾಯಕತ್ವದ ಮೇಲೆ ಭಿನ್ನಮತೀಯ ನಾಯಕ ಏಕನಾಥ್ ಶಿಂಧೆ ಅವರು ಮತ್ತೊಂದು ತೀಕ್ಷ್ಣ ವಾಗ್ದಾಳಿ ನಡೆಸಿದ್ದಾರೆ. ಬಾಂಬ್ ಸ್ಫೋಟಗಳನ್ನು ಪ್ರಚೋದಿಸುವ ಮೂಲಕ ಅಮಾಯಕ ಮುಂಬಯಿಗರನ್ನು ಕೊಂದ ದಾವೂದ್ ಇಬ್ರಾಹಿಂನೊಂದಿಗೆ ನೇರ ಸಂಪರ್ಕ ಹೊಂದಿರುವ ಜನರನ್ನು ಬಾಳ್ ಠಾಕ್ರೆ ಅವರ ಪಕ್ಷವು ಹೇಗೆ ಬೆಂಬಲಿಸಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.
ಅಂತಹ ಬೆಂಬಲವನ್ನು ವಿರೋಧಿಸಲು ನಾನು ಮತ್ತು ಇತರ ಶಾಸಕರು ಬಂಡಾಯದ ಬಾವುಟವನ್ನು ಹಾರಿಸಿದ್ದೇವೆ ಮತ್ತು ಬಾಳ್ ಠಾಕ್ರೆ ಅವರ ಶಿವಸೇನೆಯನ್ನು ಉಳಿಸುವ ಪ್ರಯತ್ನದಲ್ಲಿ ಪ್ರಾಣದ ಕಾಳಜಿಯನ್ನೂ ವಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ.
ಭಾನುವಾರ ರಾತ್ರಿ ಶಿಂಧೆ ಮಾಡಿದ ಟ್ವೀಟ್ಗಳು ದಾವೂದ್ ಇಬ್ರಾಹಿಂನ ಸಂಬಂಧಿಕರನ್ನು ಒಳಗೊಂಡಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ಎನ್ಸಿಪಿ ಸಚಿವ ನವಾಬ್ ಮಲಿಕ್ ಅವರ ಬಗೆಗಿನದಾಗಿದೆ.
ಈ ಟ್ವೀಟ್ಗಳ ಮೂಲಕ ಶಿಂಧೆ ಮತ್ತು ಇತರ ಬಂಡಾಯ ಶಾಸಕರನ್ನು “ಆತ್ಮಗಳಿಲ್ಲದ ದೇಹಗಳು” ಎಂದು ಕರೆದ ಶಿವಸೇನಾ ಸಂಸದ ಸಂಜಯ್ ರಾವುತ್ಗೆ ಪ್ರತ್ಯುತ್ತರ ನೀಡಲಾಗಿದೆ.
“ಮುಂಬೈ ಬಾಂಬ್ ಸ್ಫೋಟ ನಡೆಸಿ ಅಮಾಯಕ ಮುಂಬೈಗರನ್ನು ಕೊಂದ ದಾವೂದ್ ನೊಂದಿಗೆ ನೇರ ಸಂಪರ್ಕ ಹೊಂದಿರುವವರನ್ನು ಹಿಂದೂ ಹೃದಯಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಅವರ ಶಿವಸೇನೆ ಹೇಗೆ ಬೆಂಬಲಿಸುತ್ತದೆ? ಇದನ್ನು ವಿರೋಧಿಸಲು ನಾವು ಈ ಕ್ರಮವನ್ನು ತೆಗೆದುಕೊಳ್ಳುತ್ತಿದ್ದೇವೆ; ಈ ಕ್ರಮವು ನಮ್ಮನ್ನು ಸಾವಿನತ್ತ ಕೊಂಡೊಯ್ಯುತ್ತದೆ ಎಂಬ ಬಗ್ಗೆಯೂ ನಮಗೆ ಚಿಂತಿ ಇಲ್ಲ. ” ಎಂದು ಶಿಂಧೆ ಮರಾಠಿಯಲ್ಲಿ ಟ್ವೀಟ್ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.