ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಉತ್ತರಪ್ರದೇಶಸ ವೃಂದಾವನಕ್ಕೆ ಭೇಟಿ ನೀಡಿದರು ಮತ್ತು ಬಂಕೆ ಬಿಹಾರಿ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಿದರು.
ವೃಂದಾವನದಲ್ಲಿರುವ ಸರ್ಕಾರಿ ಆಶ್ರಮವಾದ ಕೃಷ್ಣ ಕುಟೀರ್ನ ನಿರ್ಗತಿಕ ಮಹಿಳೆಯರನ್ನು ಉದ್ದೇಶಿಸಿ ಅವರು ಮಾತನಾಡಿದರು, ವಿಧವೆಯರು ಮತ್ತು ನಿರ್ಗತಿಕ ಮಹಿಳೆಯರ ಪುನರ್ವಿವಾಹಕ್ಕೆ ಸಾಮಾಜಿಕ ಬೆಂಬಲ ಮತ್ತು ಅವರ ಆರ್ಥಿಕ ಸ್ವಾತಂತ್ರ್ಯದ ಅಗತ್ಯವನ್ನು ಒತ್ತಿ ಹೇಳಿದರು,
ಈ ಮಹಿಳೆಯರು ಘನತೆ ಮತ್ತು ಸ್ವಾಭಿಮಾನದಿಂದ ತುಂಬಿದ ಜೀವನವನ್ನು ನಡೆಸಬಹುದು. ವಿಧವೆಯರು ಮತ್ತು ನಿರ್ಗತಿಕ ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ತಡೆಯಲು ದೇಶ ಮುಂದಾಗಬೇಕು. ಉತ್ತರ ಪ್ರದೇಶ ಸರ್ಕಾರವು ನಿರ್ಗತಿಕರಿಗೆ ಮತ್ತು ವಿಧವೆಯರಿಗೆ ಸಹಾಯ ಮಾಡುತ್ತಿದೆ ಮತ್ತು ಗೋರಖ್ಪುರ, ವಾರಣಾಸಿ ಮತ್ತು ಲಕ್ನೋದಂತಹ ಇತರ ಸ್ಥಳಗಳಲ್ಲಿಯೂ ಅಂತಹ ಆಶ್ರಮಗಳನ್ನು ಮಾಡಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಅವರು, ಚಿಕ್ಕ ವಯಸ್ಸಿನಲ್ಲಿಯೇ ವಿಧವೆಯಾಗುವ ಮಹಿಳೆಯರಿಗೆ ಮರುಮದುವೆಯಾಗುವ ಅವಕಾಶ ಸಿಗಬೇಕು ಎಂದು ಪ್ರತಿಪಾದಿಸಿದರು.
ಈ ಸಂದರ್ಭದಲ್ಲಿ ಕೃಷ್ಣ ಕುಟೀರ ಆಶ್ರಮದ ಮಹಿಳೆ ತಮ್ಮ ಅನುಭವಗಳನ್ನು ಹಂಚಿಕೊಂಡರು ಮತ್ತು ತಮಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಿದ ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.