ಕೊಲಂಬೊ: ಶ್ರೀಲಂಕಾದಲ್ಲಿ ಸೋಮವಾರ ಮಧ್ಯರಾತ್ರಿಯಿಂದ ಜುಲೈ 10 ರವರೆಗೆ ಅಗತ್ಯ ಸೇವೆಗಳು ಮಾತ್ರ ಕಾರ್ಯನಿರ್ವಹಿಸುತ್ತವೆ ಮತ್ತು ತೀವ್ರ ಇಂಧನ ಕೊರತೆಯ ಕಾರಣ ಇತರ ಎಲ್ಲಾ ಕಾರ್ಯಾಚರಣೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ಸೋಮವಾರ ಅಲ್ಲಿನ ಶ್ರೀಲಂಕಾ ಸರ್ಕಾರ ಪ್ರಕಟಿಸಿದೆ.
ಆಹಾರ, ಇಂಧನ ಮತ್ತು ವಿದ್ಯುತ್ ಕೊರತೆಯ ಉಂಟಾದ ತಿಂಗಳುಗಳ ನಂತರ ದ್ವೀಪ ರಾಷ್ಟ್ರದ ಸಾಲ ಪೀಡಿತ ಆರ್ಥಿಕತೆಯು ಸಂಪೂರ್ಣ ನೆಲಕಚ್ಚಿದೆ. ಆಮದು ಮಾಡಿಕೊಂಡ ತೈಲವನ್ನು ಸಹ ಖರೀದಿಸಲು ಸಾಧ್ಯವಿಲ್ಲದ ಪರಿಸ್ಥಿತಿ ಇದೆ ಎಂದು ಪ್ರಧಾನಿ ರನಿಲ್ ವಿಕ್ರಮಸಿಂಘೆ ಅವರು ಹೇಳಿದ್ದಾರೆ.
ಶ್ರೀಲಂಕಾದ ಸಚಿವ ಸಂಪುಟವು ಸೋಮವಾರ ಮಧ್ಯರಾತ್ರಿಯಿಂದ ಜುಲೈ 10 ರವರೆಗೆ ಅಗತ್ಯ ಸೇವೆಗಳನ್ನು ಮಾತ್ರ ಕಾರ್ಯನಿರ್ವಹಿಸಲು ನಿರ್ಧರಿಸಿದೆ ಎಂದು ವರದಿ ತಿಳಿಸಿದೆ.
ಸರ್ಕಾರಿ ಸ್ವಾಮ್ಯದ ಸಿಲೋನ್ ಪೆಟ್ರೋಲಿಯಂ ಕಾರ್ಪೊರೇಷನ್ (CPC) ಮಧ್ಯರಾತ್ರಿಯಿಂದ ಜಾರಿಗೆ ಬರುವಂತೆ ಅಗತ್ಯ ಸೇವೆಗಳಿಗೆ ಮಾತ್ರ ಡೀಸೆಲ್ ಮತ್ತು ಪೆಟ್ರೋಲ್ ಅನ್ನು ನೀಡಲಿದೆ ಎಂದು ಅದು ಹೇಳಿದೆ.
ಈ ಸೇವೆಗಳಲ್ಲಿ ಬಂದರುಗಳು, ವಿಮಾನ ನಿಲ್ದಾಣಗಳು, ಆರೋಗ್ಯ, ಆಹಾರ ವಿತರಣೆ ಮತ್ತು ಕೃಷಿ ಸೇರಿವೆ.
“ಇತರ ಎಲ್ಲಾ ಕ್ಷೇತ್ರಗಳು ಮನೆಯಿಂದ ಕೆಲಸ ಮಾಡಲು ತಯಾರಿ ಮಾಡಬೇಕು. ಇಂಧನ ಬಳಕೆಯನ್ನು ಮಿತಿಗೊಳಿಸುವ ಸರ್ಕಾರದ ಕ್ರಮವನ್ನು ಸಾರ್ವಜನಿಕರು ಬೆಂಬಲಿಸಬೇಕು ಎಂದು ಸರ್ಕಾರ ಕರೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.