ಉಧಯ್ಪುರ್: ರಾಜಸ್ಥಾನದ ಉದಯಪುರ್ನಲ್ಲಿ ನಡೆದ ಟೈಲರ್ ಕನ್ನಯ್ಯ ಲಾಲ್ ಅವರ ಕೊಲೆ ಇಡೀ ದೇಶವನ್ನು ತಲ್ಲಣಗೊಳಿಸಿದೆ. ಈ ಅಮಾನವೀಯ ಕೃತ್ಯ ವಿಡಿಯೋದಲ್ಲಿ ಸೆರೆಯಾಗಿದೆ.
ಈ ಕೃತ್ಯದ ಬಗ್ಗೆ ತನಿಖೆ ನಡೆಸುವ ಜವಾಬ್ದಾರಿಯನ್ನು ಕೇಂದ್ರ ಗೃಹಸಚಿವಾಲಯವು ರಾಷ್ಟ್ರೀಯ ತನಿಖಾ ದಳ (ಎನ್ಐಎ)ಕ್ಕೆ ವಹಿಸಿದೆ.
ಈ ಬಗ್ಗೆ ಟ್ವೀಟ್ ಮಾಡಿರುವ ಕೇಂದ್ರ ಗೃಹ ಸಚಿವಾಲಯ, “ರಾಷ್ಟ್ರೀಯ ತನಿಖಾ ದಳವು ಕನ್ನಯ್ಯ ಲಾಲ್ ಅವರ ಕೊಲೆ ಪ್ರಕರಣವನ್ನು ತನಿಖೆ ನಡೆಸಲಿದೆ. ಪ್ರಕರಣದಲ್ಲಿ ಯಾವುದಾದರು ಸಂಘಟನೆ ಅಥವಾ ಅಂತರಾಷ್ಟ್ರೀಯ ಸಂಪರ್ಕಗಳ ಬಗ್ಗೆ ವಿಸ್ತೃತ ತನಿಖೆಯನ್ನು ನಡೆಸಲಾಗುತ್ತದೆ” ಎಂದಿದೆ.
ಕೊಲೆಯಲ್ಲಿ ಭಾಗಿಯಾದ ಕಟುಕರನ್ನು ಮಹಮ್ಮದ್ ಮತ್ತು ರಿಯಾಜ್ ಅಕ್ತಾರಿ ಎಂದು ಗುರುತಿಸಲಾಗಿದ್ದು, ಬಂಧನಕ್ಕೊಳಪಡಿಸಲಾಗಿದೆ. ಕನ್ನಯ್ಯ ಲಾಲ್ ಅವರ ಅಂಗಡಿಗೆ ಗ್ರಾಹಕರಂತೆ ಸೋಗು ಧರಿಸಿ ಬಂದು ಅಳತೆ ತೆಗೆಯುವ ಸಂದರ್ಭದಲ್ಲಿ ಕುತ್ತಿಗೆಯನ್ನು ಸೀಳಿ ಕೊಲೆ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಉದಯಪುರ್ನಲ್ಲಿ ಒಂದು ತಿಂಗಳುಗಳ ಕಾಲ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
MHA has directed the National Investigation Agency (NIA) to take over the investigation of the brutal murder of Kanhaiya Lal Teli committed at Udaipur, Rajasthan yesterday. The involvement of any organisation and international links will be thoroughly investigated: HMO India pic.twitter.com/ZWxTa01rMC
— ANI (@ANI) June 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.