ನವದೆಹಲಿ: ರಾಜಸ್ಥಾನದ ಉದಯಪುರ್ನಲ್ಲಿ ನಡೆದಿರುವ ಕನ್ಹಯ್ಯ ಲಾಲ್ ಅವರ ಭೀಕರ ಹತ್ಯೆ ಪ್ರಕರಣದ ಬಗ್ಗೆ ಕೇರಳ ರಾಜ್ಯಪಾಲ ಆರಿಫ್ ಮೊಹಮ್ಮದ್ ಖಾನ್ ಅವರು ಕಳವಳ ವ್ಯಕ್ತಪಡಿಸಿದ್ದಾರೆ.
“ರೋಗದ ಗುಣಲಕ್ಷಣಗಳು ಗೋಚರಿಸಿದಾಗ ನಾವು ಚಿಂತೆಗೀಡಾಗುತ್ತೇವೆ ಆದರೆ ರೋಗದ ಆಳವನ್ನು ಗುರುತಿಸುವಲ್ಲಿ ನಾವು ನಿರ್ಲಕ್ಷ್ಯ ಮಾಡುತ್ತೇವೆ. ಧರ್ಮ ನಿಂದನೆಗೆ ಶಿರಚ್ಛೇದವೇ ಶಿಕ್ಷೆ ಎಂದು ಮದರಸಗಳಲ್ಲಿ ಮಕ್ಕಳಿಗೆ ಹೇಳಿಕೊಡಲಾಗುತ್ತದೆ. ಇದುವೇ ದೇವರ ಕಾನೂನು ಎಂದೂ ಕಲಿಸಲಾಗುತ್ತದೆ. ಅಲ್ಲಿ ಕಲಿಸುವ ವಿಷಯಗಳ ಬಗ್ಗೆ ಪರಿಶೀಲನೆ ಮಾಡಬೇಕಾಗಿದೆ” ಎಂದು ಆರಿಫ್ ಖಾನ್ ಹೇಳಿದ್ದಾರೆ.
ನೂಪುರ್ ಶರ್ಮಾ ಅವರು ಪ್ರವಾದಿ ಬಗ್ಗೆ ನೀಡಿದ ಹೇಳಿಕೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಹಾಕಿದಕ್ಕೆ ಸಂಬಂಧಿಸಿದಂತೆ ಕನ್ಹಯ್ಯ ಲಾಲ್ ಅವರನ್ನು ಅವರ ಅಂಗಡಿಯೊಳಗೆ ಕತ್ತು ಸೀಳಿ ಹತ್ಯೆ ಮಾಡಲಾಗಿದೆ. ಈ ಪ್ರಕರಣ ಇಡೀ ದೇಶವನ್ನೇ ತಲ್ಲಣಗೊಳಿಸಿದೆ.
ಇಬ್ಬರು ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ಇವರಿಗೆ ಅಂತರಾಷ್ಟ್ರೀಯ ಸಂಪರ್ಕ ಇರುವ ಬಗ್ಗೆ ಅನುಮಾನಗಳು ವ್ಯಕ್ತವಾಗಿವೆ.
We worry when symptoms come but refuse to notice the deeper disease. Children are being taught in madrassas that punishment for blasphemy is beheading. It's being taught as the law of God…What's being taught there should be examined: Kerala Gov AM Khan on Udaipur beheading case pic.twitter.com/oqys2KFGyS
— ANI (@ANI) June 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.