ನವದೆಹಲಿ: ಅಸ್ಸಾಂ ಪ್ರವಾಹ ಪರಿಸ್ಥಿತಿಯಿಂದ ತೀವ್ರವಾಗಿ ನಲುಗಿ ಹೋಗಿದೆ. ಈ ಹಿನ್ನೆಲೆಯಲ್ಲಿ ಒಂದು ವಾರದಿಂದ ಗುವಾಹಟಿ ಹೋಟೆಲ್ನಲ್ಲಿ ಬೀಡು ಬಿಟ್ಟಿರುವ ಶಿವಸೇನೆಯ ಬಂಡಾಯ ನಾಯಕ ಏಕನಾಥ್ ಶಿಂಧೆ ಗುಂಪು ಸಂತ್ರಸ್ತ ಜನರಿಗೆ ಸಹಾಯ ಮಾಡಲು ಸಿಎಂ ಪರಿಹಾರ ನಿಧಿಗೆ 51 ಲಕ್ಷ ರೂ ದಾನ ನೀಡಿದೆ.
ಶಿಂಧೆ ಶಿಬಿರದ ನಡೆಯನ್ನು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಶ್ಲಾಘಿಸಿದ್ದು, ಕೃತಜ್ಞತೆ ಸಲ್ಲಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗೆ ನೆರವಾಗಲು ಈ ಮೊತ್ತ ಸಹಾಯ ಮಾಡುತ್ತದೆ ಎಂದಿದ್ದಾರೆ.
“ಪ್ರವಾಹ ಪೀಡಿತ ಜನರಿಗೆ ಸಹಾಯ ಮಾಡಲು ಶಿವಸೇನೆ ಶಾಸಕರು ಮತ್ತು ಮಿತ್ರಪಕ್ಷಗಳ ನಾಯಕರು ಅಸ್ಸಾಂ ಸಿಎಂ ಪರಿಹಾರ ನಿಧಿಗೆ 51 ಲಕ್ಷ ರೂಪಾಯಿಗಳನ್ನು ನೀಡಲು ನಿರ್ಧರಿಸಿದ್ದಾರೆ” ಎಂದು ಏಕನಾಥ್ ಶಿಂಧೆ ಟ್ವೀಟ್ ಮಾಡಿದ್ದಾರೆ.
ಬಂಡಾಯ ಶಾಸಕರ ದೇಣಿಗೆಗೆ ಪ್ರತಿಕ್ರಿಯಿಸಿದ ಶರ್ಮಾ, “ಸಿಎಂ ಪರಿಹಾರ ನಿಧಿಗೆ 51 ಲಕ್ಷ ರೂ. ಕೊಡುಗೆ ನೀಡಿದ ಏಕನಾಥ ಶಿಂಧೆ ನೇತೃತ್ವದ ಶಿವಸೇನೆಯ ಗೌರವಾನ್ವಿತ ಶಾಸಕರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಈ ಕೊಡುಗೆಯು ಪ್ರವಾಹ ಪೀಡಿತರನ್ನು ತಲುಪುವಲ್ಲಿ ಬಹಳ ದೂರ ಸಾಗುತ್ತದೆ. ಸಂತ್ರಸ್ತರು ಮತ್ತು ನಮ್ಮ ರಾಜ್ಯದ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರವನ್ನು ಖಾತ್ರಿಪಡಿಸಲಾಗುತ್ತಿದೆ” ಎಂದಿದ್ದಾರೆ.
ಈ ನಡುವೆ, ಭಾರತೀಯ ವಾಯುಪಡೆ ಕಳೆದ ಆರು ದಿನಗಳಲ್ಲಿ ಒಟ್ಟು 517 ಟನ್ ಪರಿಹಾರ ಸಾಮಗ್ರಿಗಳನ್ನು ವಿಮಾನದಲ್ಲಿ ರವಾನಿಸಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
“ಐಎಎಫ್ನ ಪರಿಹಾರ ಕಾರ್ಯಾಚರಣೆಗಳು ಹಗಲು ರಾತ್ರಿ ನಿರಂತರವಾಗಿ ಮುಂದುವರೆದಿದೆ. ಕಳೆದ ಆರು ದಿನಗಳಲ್ಲಿ, ಅಸ್ಸಾಂ ಮತ್ತು ಮೇಘಾಲಯದ ವಿವಿಧ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಒಟ್ಟು 517 ಟನ್ಗಳ ಪರಿಹಾರ ಸಾಮಗ್ರಿಗಳನ್ನು ಏರ್ಲಿಫ್ಟ್ ಮಾಡಲಾಗಿದೆ” ಎಂದು ಐಎಎಫ್ ಟ್ವೀಟ್ ಮಾಡಿದೆ.
मा. श्री. शिंदे साहेब व शिवसेनेचे सर्व आमदार तसेच सहयोगी आमदारानचे धन्यवाद
आपण आसामच्या महापुरा साठी ५१ लाखाची मुख्यमंत्री मदत निधी केली आपले खुप आभारी आहोत. https://t.co/iCEcbZ6nZq— Himanta Biswa Sarma (@himantabiswa) June 29, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.