ಮುಂಬಯಿ: ಮಹಾರಾಷ್ಟ್ರದ ಎರಡು ನಗರಗಳ ಹೆಸರುಗಳನ್ನು ಮರು ನಾಮಕರಣ ಮಾಡಲು ಅನುಮೋದನೆ ಸಿಕ್ಕಿದೆ. ಔರಂಗಬಾದ್ ನಗರವನ್ನು ಶಂಭಾಜಿ ನಗರ ಎಂದು ಮರು ನಾಮಕರಣ ಮಾಡಲು ಮತ್ತ ಒಸ್ಮಾನಿಯಾ ನಗರವನ್ನು ಧರಶಿವ್ ನಗರ ಎಂದು ಮರುನಾಮಕರಣ ಮಾಡಲು ನಿರ್ಧರಿಸಲಾಗಿದೆ.
ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರದ ಸಂಪುಟ ಬುಧವಾರ ಈ ನಿರ್ಧಾರವನ್ನು ತೆಗೆದುಕೊಂಡಿತ್ತು. ಠಾಕ್ರೆ ಸಂಪುಟದ ಕೊನೆಯ ನಿರ್ಧಾರವೂ ಹೌದು.
ಶಿವಸೇನೆಯು ತನ್ನ ಜಾತ್ಯತೀತ ಮಿತ್ರಪಕ್ಷಗಳಾದ ಎನ್ಸಿಪಿ ಮತ್ತು ಕಾಂಗ್ರೆಸ್ನ ಒತ್ತಡಕ್ಕೆ ಮಣಿದು ಔರಂಗಾಬಾದ್ಗೆ ಮರುನಾಮಕರಣ ಮಾಡುವ ಭರವಸೆಯನ್ನು ಈಡೇರಿಸುತ್ತಿಲ್ಲ ಎಂದು ಪ್ರತಿಪಕ್ಷ ಬಿಜೆಪಿ ಪದೇ ಪದೇ ಆರೋಪಿಸುತ್ತಲೇ ಬಂದಿತ್ತು.
ಏಕನಾಥ್ ಶಿಂಧೆ ನೇತೃತ್ವದ ಬಂಡಾಯ ನಾಯಕರು ಕೂಡ ಕಳೆದ ವಾರ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆಯ ಹಿಂದುತ್ವದ ಬದ್ಧತೆಯನ್ನು ಬಹಿರಂಗವಾಗಿಯೇ ಪ್ರಶ್ನಿಸಿದ್ದರು.
ಇದೇ ಕಾರಣದಿಂದ ಕೊನೆ ಕ್ಷಣದಲ್ಲಿ ಉದ್ಧವ್ ಠಾಕ್ರೆ ಅವರು ಎರಡು ನಗರಗಳಿಗೆ ಮರಾಠ ನಾಯಕರ ಹೆಸರನ್ನು ಇಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.