ನವದೆಹಲಿ: ಇದುವರೆಗೆ ರಾಷ್ಟ್ರಪತಿ ಚುನಾವಣೆಗೆ 115 ನಾಮಪತ್ರಗಳನ್ನು ಸಲ್ಲಿಕೆ ಮಾಡಲಾಗಿದೆ. ಆದರೆ ಈ ನಾಮಪತ್ರಗಳ ಪೈಕಿ ಕೇವಲ ಎರಡು ನಾಮಪತ್ರಗಳು ಮಾತ್ರ ಮಾನ್ಯ ಆಗಿವೆ.
ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಮತ್ತು ಪ್ರತಿಪಕ್ಷಗಳ ಅಭ್ಯರ್ಥಿ ಯಶವಂತ್ ಸಿನ್ಹಾ ಅವರ ನಾಮಪತ್ರಗಳು ಮಾತ್ರ ಸ್ವೀಕಾರಕ್ಕೆ ಅರ್ಹವಾಗಿದೆ ಎಂದು ರಾಜ್ಯಸಭಾ ಕಾರ್ಯದರ್ಶಿ ಪಿ ಸಿ ಮೋದಿ ಹೇಳಿದ್ದಾರೆ.
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ದಿನಾಂಕ ಜೂನ್ 15ರಿಂದ ಆರಂಭವಾಗಿದೆ ಮತ್ತು ಇದು ಜೂನ್ 29ರಂದು ಕೊನೆಗೊಂಡಿದೆ.
“ನಾಮಪತ್ರ ಸಲ್ಲಿಕೆ ಅವಧಿಯಲ್ಲಿ ನಾನು 115 ನಾಮಪತ್ರಗಳನ್ನು ಸ್ವೀಕರಿಸಿದ್ದೇನೆ. ಇವುಗಳ ಪೈಕಿ 28 ನಾಮಪತ್ರಗಳನ್ನು ಕಾನೂನು ವ್ಯಾಪ್ತಿಯಲ್ಲಿ ಸಲ್ಲಿಸಿದ ಸಂದರ್ಭದಲ್ಲೇ ತಿರಸ್ಕರಿಸಲಾಗಿದೆ. ಈ ನಾಮಪತ್ರಗಳು ಚುನಾವಣಾ ನೀತಿಗೆ ಅನುಗುಣವಾಗಿ ಇರಲಿಲ್ಲ” ಎಂದಿದ್ದಾರೆ.
“ಉಳಿದ 87 ನಾಮಪತ್ರಗಳನ್ನು ಪರಿಶೀಲನೆಗೆ ಕಳುಹಿಸಲಾಗಿತ್ತು. ಇವುಗಳು ಕೂಡ ಅಗತ್ಯ ಬೇಡಿಕೆಗಳನ್ನು ಪೂರೈಸದ ಹಿನ್ನೆಲೆಯಲ್ಲಿ ತಿರಸ್ಕೃತಗೊಂಡಿವೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.