ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶುಕ್ರವಾರ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮೋದಿ ಉಕ್ರೇನ್ ಪರಿಸ್ಥಿತಿಯ ಬಗ್ಗೆ ಭಾರತದ ದೀರ್ಘಕಾಲದ ನಿಲುವನ್ನು ಪುನರುಚ್ಚರಿಸಿದ್ದಾರೆ.
ಮಾತುಕತೆ ಮತ್ತು ರಾಜತಾಂತ್ರಿಕತೆ ಮೂಲಕ ಬಿಕ್ಕಟು ಶಮನಕ್ಕೆ ಪ್ರಯತ್ನಿಸುವಂತೆ ಮೋದಿ ಮತ್ತೊಮ್ಮೆ ರಷ್ಯಾ ಅಧ್ಯಕ್ಷರಿಗೆ ಮನವಿ ಮಾಡಿದ್ದಾರೆ..
ದೂರವಾಣಿ ಸಂಭಾಷಣೆಯ ಸಮಯದಲ್ಲಿ, 2021 ರ ಡಿಸೆಂಬರ್ನಲ್ಲಿ ಅಧ್ಯಕ್ಷ ಪುಟಿನ್ ಅವರ ಭಾರತಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ತೆಗೆದುಕೊಂಡ ನಿರ್ಧಾರಗಳ ಅನುಷ್ಠಾನವನ್ನು ಉಭಯ ನಾಯಕರು ಪರಿಶೀಲಿಸಿದರು ಎಂದು ಪ್ರಧಾನ ಮಂತ್ರಿ ಕಚೇರಿಯ ಹೇಳಿಕೆ ತಿಳಿಸಿದೆ.
ಕೃಷಿ ಸರಕುಗಳು, ರಸಗೊಬ್ಬರಗಳು ಮತ್ತು ಫಾರ್ಮಾ ಉತ್ಪನ್ನಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು ಹೇಗೆ ಉತ್ತೇಜಿಸಬಹುದು ಎಂಬುದರ ಕುರಿತು ಉಭಯ ನಾಯಕರು ವಿಚಾರಗಳನ್ನು ವಿನಿಮಯ ಮಾಡಿಕೊಂಡರು ಎಂದು ಅದು ಹೇಳಿದೆ. ಉಭಯ ನಾಯಕರು ಅಂತರರಾಷ್ಟ್ರೀಯ ಇಂಧನ ಮತ್ತು ಆಹಾರ ಮಾರುಕಟ್ಟೆಯ ಸ್ಥಿತಿ ಸೇರಿದಂತೆ ಜಾಗತಿಕ ವಿಷಯಗಳ ಬಗ್ಗೆಯೂ ಚರ್ಚಿಸಿದ್ದಾರೆ.
“ಉಕ್ರೇನ್ನಲ್ಲಿ ನಡೆಯುತ್ತಿರುವ ಯುದ್ಧದ ಪರಿಸ್ಥಿತಿಯ ಸಂದರ್ಭದಲ್ಲಿ, ಮಾತುಕತೆ ಮತ್ತು ರಾಜತಾಂತ್ರಿಕತೆಯ ಪರವಾಗಿ ಭಾರತದ ದೀರ್ಘಕಾಲದ ನಿಲುವನ್ನು ಪ್ರಧಾನಿ ಪುನರುಚ್ಚರಿಸಿದರು” ಎಂದು ಪಿಎಂಒ ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.