ನವದೆಹಲಿ: ಹರ್ ಘರ್ ತಿರಂಗಾ ಅಭಿಯಾನ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಬಡವರ ಪರವಾದ ಕಾರ್ಯಕ್ರಮಗಳ ಫಲಾನುಭವಿಗಳನ್ನು ತಲುಪುವತ್ತ ಆಡಳಿತರೂಢ ಬಿಜೆಪಿ ಹೆಚ್ಚಿನ ಗಮನವನ್ನು ನೀಡಲಿದ್ದು, 2024 ರ ಸಾರ್ವತ್ರಿಕ ಚುನಾವಣೆಗೆ ಇದು ಬಿಜೆಪಿಯ ಪ್ರಮುಖ ಕಾರ್ಯತಂತ್ರವಾಗಿದೆ.
ಹೈದರಾಬಾದಿನಲ್ಲಿ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ನೇತೃತ್ವದಲ್ಲಿ ಇಂದು ನಡೆದ ಬಿಜೆಪಿ ಕಾರ್ಯಕಾರಿಣಿ ಸಭೆಯ ಕುರಿತು ಮಾಹಿತಿ ನೀಡಿದ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ, ದೇಶದ ವಿವಿಧ ಭಾಗಗಳ 20 ಕೋಟಿ ಜನರನ್ನು ತಲುಪಲು ಹರ್ ಘರ್ ತಿರಂಗ ಕಾರ್ಯಕ್ರಮವನ್ನು ಆಂದೋಲನವಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.
ವಿವಿಧ ಬಡವರ ಪರ ಯೋಜನೆಗಳ 30 ಕೋಟಿ ಫಲಾನುಭವಿಗಳನ್ನು ತಲುಪುವ ಮಾರ್ಗಗಳ ಬಗ್ಗೆಯೂ ಪದಾಧಿಕಾರಿಗಳು ಚರ್ಚೆ ನಡೆಸಿದ್ದಾರೆ ಎಂದರು.
ಇತ್ತೀಚಿನ ಚುನಾವಣೆಯಲ್ಲಿ ಪ್ರಧಾನಿಯವರ ಸಮಾಜ ಕಲ್ಯಾಣ ಯೋಜನೆಗಳ ಲಾಭವನ್ನು ಬಿಜೆಪಿ ಪಡೆದುಕೊಂಡಿದ್ದು, ಜನರ ಮನಸ್ಸನ್ನು ಗೆಲ್ಲುವಲ್ಲಿ ಯಶಸ್ವಿಯೂ ಆಗಿದೆ. ಪಕ್ಷವು ಪ್ರಸ್ತುತ ಪರಿಸ್ಥಿತಿಯ ಬಗ್ಗೆ ರಾಜಕೀಯ ಮತ್ತು ಆರ್ಥಿಕ ನಿರ್ಣಯಗಳನ್ನು ಸಹ ಸಭೆಯು ಅಂಗೀಕರಿಸುತ್ತದೆ ಎಂದಿದ್ದಾರೆ.
ಜನರನ್ನು ಭೇಟಿ ಮಾಡುವ ಮತ್ತು ಬೂತ್ ಮಟ್ಟದ ಕಾರ್ಯಕರ್ತರನ್ನು ತಲುಪುವ ಬಗ್ಗೆಯೂ ಸಭೆ ಒತ್ತಿಹೇಳಿದೆ ಎಂದಿದ್ದಾರೆ.
“ಪ್ರತಿ ಬೂತ್ನಲ್ಲಿ 200 ಸಕ್ರಿಯ ಕಾರ್ಯಕರ್ತರು ಇರುತ್ತಾರೆ ಮತ್ತು ಅವರು ವಾಟ್ಸಾಪ್ ಗುಂಪುಗಳಲ್ಲಿ ಸೇರಿಕೊಳ್ಳುತ್ತಾರೆ. ಬೂತ್ ಬಲವರ್ಧನೆಯನ್ನು ಕಾಲಕಾಲಕ್ಕೆ ಪರಿಶೀಲಿಸಲಾಗುವುದು” ಎಂದು ರಾಜೆ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.