ನವದೆಹಲಿ: ಉದಯಪುರ್ನಲ್ಲಿ ಕನ್ಹಯ್ಯಾ ಲಾಲ್ ಹತ್ಯೆ ಪ್ರಕರಣದ ಎಲ್ಲಾ ನಾಲ್ವರು ಆರೋಪಿಗಳನ್ನು ಇಂದು 10 ದಿನಗಳ ಎನ್ಐಎ ವಶಕ್ಕೆ ಕಳುಹಿಸಲಾಗಿದೆ. ಅವರನ್ನು ಇಂದು ಜೈಪುರದ ವಿಶೇಷ ಎನ್ಐಎ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಈ ಸಂದರ್ಭದಲ್ಲಿ ಅವರನ್ನು ಪೊಲೀಸರು ಕರೆದೊಯ್ಯುವಾಗ ನ್ಯಾಯಾಲಯದ ಹೊರಗೆ ವಕೀಲರು ಥಳಿಸಿದ್ದಾರೆ. ಸಾರ್ವಜನಿಕರು ಕೂಡ ಆರೋಪಿಗಳ ಮೇಲೆ ದಾಳಿ ನಡೆಸಲು ಮುಂದಾಗಿದ್ದಾರೆ. ನಂತರ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿದ್ದಾರೆ.
ಇಂದು ಮುಂಜಾನೆ, ಇಬ್ಬರು ಪ್ರಮುಖ ಆರೋಪಿಗಳಾದ ಮುಹಮ್ಮದ್ ರಿಯಾಜ್ ಮತ್ತು ಘೌಸ್ ಮುಹಮ್ಮದ್ ಅವರನ್ನು ಬಿಗಿ ಭದ್ರತೆಯ ನಡುವೆ ಅಜ್ಮೀರ್ ಜೈಲಿನಿಂದ ಜೈಪುರಕ್ಕೆ ಕರೆತರಲಾಗಿದೆ.
ಆರಂಭದಲ್ಲಿ, ಅವರನ್ನು ಎಟಿಎಸ್ ಪ್ರಧಾನ ಕಚೇರಿಗೆ ಕರೆದೊಯ್ಯಲಾಯಿತು.
ಗುರುವಾರ ರಾತ್ರಿ ಬಂಧಿಸಲಾದ ಇತರ ಇಬ್ಬರು ಆರೋಪಿಗಳಾದ ಮೊಹ್ಸಿನ್ ಮತ್ತು ಆಸಿಫ್ ಅನ್ನು ಎಟಿಎಸ್ ಪ್ರಧಾನ ಕಚೇರಿಯಲ್ಲಿ ಇರಿಸಲಾಗಿದೆ.
ಏತನ್ಮಧ್ಯೆ, ಕನ್ಹಯ್ಯಾ ಲಾಲ್ ಅವರ ಶಿರಚ್ಛೇದದಲ್ಲಿ ಭಯೋತ್ಪಾದಕ ಸಂಘಟನೆಗಳ ಪಾತ್ರವಿಲ್ಲ ಎಂದು ರಾಜಸ್ಥಾನದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್)ದ ಹೇಳಿಕೆಯನ್ನು ಎನ್ಐಎ ವಿರೋಧಿಸಿದೆ. ತನಿಖೆ ಇನ್ನೂ ಪ್ರಾಥಮಿಕ ಹಂತದಲ್ಲಿರುವುದರಿಂದ ಇದು ಅಕಾಲಿಕ ಹೇಳಿಕೆ ಎಂದು ಹೇಳಿದೆ.
ಉದಯಪುರ ಹೆಚ್ಚುವರಿ ಎಸ್ಪಿ ಅಶೋಕ್ ಕುಮಾರ್ ಮೀನಾ ಅವರನ್ನು ಶುಕ್ರವಾರ ಸಂಜೆ ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಈ ಹಿಂದೆ ಎಸ್ಎಚ್ಒ ಮತ್ತು ಎಸ್ಐ ಕೂಡ ಅಮಾನತುಗೊಂಡಿದ್ದರು.
Udaipur beheading: Lawyers thrash all four arrested accused. They were presented before a special NIA court in Jaipur today. The incident took place when they were being taken back after the hearing. The court has sent them to 10-day NIA remand. #UdaipurHorror pic.twitter.com/F9lgLamEzX
— Free Press Journal (@fpjindia) July 2, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.