ಜಬಲ್ಪುರ: ಎಎಪಿ ಮತ್ತು ಕಾಂಗ್ರೆಸ್ನ ಓಲೈಕೆ ರಾಜಕಾರಣದಿಂದಾಗಿ ದೇಶದಲ್ಲಿ ಭಯೋತ್ಪಾದನೆ ಉತ್ತುಂಗದಲ್ಲಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಆರೋಪಿಸಿದ್ದಾರೆ.
ಭಾನುವಾರ ಜಬಲ್ಪುರದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಚೌಹಾಣ್, “ಕಾಂಗ್ರೆಸ್ ಪಕ್ಷದಿಂದಾಗಿ ಭಯೋತ್ಪಾದನೆ ಉತ್ತುಂಗದಲ್ಲಿದೆ. ಉದಯಪುರದಲ್ಲಿ ಇತ್ತೀಚೆಗೆ ಹಾಡು ಹಗಲೇ ಹತ್ಯೆಯಾಗಿದೆ. ನಾವು ಭಯೋತ್ಪಾದನೆಯನ್ನು ಹತ್ತಿಕ್ಕುತ್ತೇವೆ. ನಾವು ದುಷ್ಕರ್ಮಿಗಳ ಮೇಲೆ ಬುಲ್ಡೋಜರ್ಗಳನ್ನು ಓಡಿಸುತ್ತೇವೆ” ಎಂದು ಹೇಳಿದ್ದಾರೆ.
“ಭಯೋತ್ಪಾದನೆಯು ತುಷ್ಟೀಕರಣದ ನೀತಿಯಿಂದ ಮಾತ್ರ ಬೆಳೆಯುತ್ತದೆ, ಮಧ್ಯಪ್ರದೇಶದ ನೆಲದಲ್ಲಿ ಯಾವುದೇ ಭಯೋತ್ಪಾದಕ, ಗೂಂಡಾ ಮತ್ತು ವಂಚಕರಿಗೆ ಸ್ಥಾನವಿಲ್ಲ” ಎಂದು ಅವರು ಹೇಳಿದ್ದಾರೆ.
ಮಧ್ಯಪ್ರದೇಶದಲ್ಲಿ ‘ಸಾಮಾಜಿಕ ಕ್ರಾಂತಿ’ ತರುತ್ತೇನೆ ಎಂದು ಶಿವರಾಜ್ ಹೇಳಿದ್ದಾರೆ. “ನಾನು ಮಧ್ಯಪ್ರದೇಶದಲ್ಲಿ ಸಾಮಾಜಿಕ ಕ್ರಾಂತಿಯನ್ನು ತರಲಿದ್ದೇನೆ, ಮಧ್ಯಪ್ರದೇಶದ ನೆಲದಲ್ಲಿ ಭೂಮಿ ಇಲ್ಲದೆ ಯಾವುದೇ ಬಡವರು ಬದುಕುವುದಿಲ್ಲ” ಎಂದು ಅವರು ಹೇಳಿದರು.
“ಇಂಗ್ಲಿಷ್ ಭಾಷೆಯ ಮೇಲಿನ ಹಿಡಿತ ದುರ್ಬಲವಾಗಿದ್ದ ಮಧ್ಯಮ ಮತ್ತು ಬಡ ಕುಟುಂಬಗಳ ಮಕ್ಕಳು ವೈದ್ಯಕೀಯ ಮತ್ತು ಇಂಜಿನಿಯರಿಂಗ್ ವ್ಯಾಸಂಗದಿಂದ ವಂಚಿತರಾಗಿದ್ದಾರೆ. ಇನ್ನು ಮುಂದೆ ನಾವು ಹಿಂದಿಯಲ್ಲಿ ಕಲಿಯುವ ಆಯ್ಕೆಯನ್ನು ಒದಗಿಸುತ್ತೇವೆ, ಇದರಿಂದ ಮಕ್ಕಳು ಅವರ ಕನಸುಗಳನ್ನು ನನಸಾಗಿಸಬಹುದು” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.