ಮುಂಬಯಿ: ಮಹಾರಾಷ್ಟ್ರದಲ್ಲಿ ಬಿಜೆಪಿ ಅಭ್ಯರ್ಥಿ ರಾಹುಲ್ ನಾರ್ವೇಕರ್ ಅವರು ನಿನ್ನೆ ರಾಜ್ಯ ವಿಧಾನಸಭೆಯ ಸ್ಪೀಕರ್ ಆಗಿ ಆಯ್ಕೆಯಾಗಿದ್ದಾರೆ. ಅವರು ಮಹಾ ವಿಕಾಸ್ ಅಘಾಡಿ ನಾಮನಿರ್ದೇಶಿತ ರಾಜನ್ ಸಾಲ್ವಿ ಅವರನ್ನು ಸೋಲಿಸಿ ಸ್ಪೀಕರ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ.
ಸ್ಪೀಕರ್ ಚುನಾವಣೆಯು ಮತಗಳ ವಿಭಜನೆಯ ಮೂಲಕ ನಡೆದಿದ್ದು, ಇದರಲ್ಲಿ ನಾರ್ವೇಕರ್ 164 ಮತಗಳನ್ನು ಪಡೆದರು, ಆದರೆ ಸಾಲ್ವಿ 107 ಮತಗಳನ್ನು ಪಡೆದರು.
ಕಾರ್ಪೊರೇಟರ್ ಆಗಿ ತಮ್ಮ ಪ್ರಯಾಣವನ್ನು ಪ್ರಾರಂಭಿಸಿದ ನಾರ್ವೇಕರ್ ಅವರಿಗೆ 2015-16 ರ ಕಾಮನ್ ವೆಲ್ತ್ ಸಂಸದೀಯ ಮಂಡಳಿಯ ಅತ್ಯುತ್ತಮ ವಾಗ್ಮಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ
288 ಸದಸ್ಯ ಬಲದ ಸದನದ ಎರಡು ದಿನಗಳ ವಿಶೇಷ ಅಧಿವೇಶನ ನಿನ್ನೆ ಬೆಳಗ್ಗೆ 11 ಗಂಟೆಗೆ ಆರಂಭವಾಯಿತು. ಏಕನಾಥ್ ಶಿಂಧೆ ನೇತೃತ್ವದ ಸರ್ಕಾರ ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಪರೀಕ್ಷೆ ಎದುರಿಸಲಿದೆ.
ಬಿಜೆಪಿ ಮತ್ತು ಏಕನಾಥ್ ಶಿಂಧೆ ನೇತೃತ್ವದ ಬೆಂಬಲಿಗ ಶಾಸಕರ ಶಕ್ತಿ ಪ್ರದರ್ಶನ ಇಂದು ವಿಧಾನಸಭೆಯಲ್ಲಿ ನಡೆಯಲಿದ್ದು, ಎಲ್ಲರ ಚಿತ್ತ ವಿಶ್ವಾಸ ಮತಯಾಚನೆಯತ್ತ ಹೊರಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.