ನವದೆಹಲಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಲ್ಲಿ ಸ್ವಾತಂತ್ರ್ಯ ಹೋರಾಟಗಾರ ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜನ್ಮ ದಿನಾಚರಣೆಯ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಭಾಗವಹಿಸಿ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮೋದಿ, ಸ್ವಾತಂತ್ರ್ಯದ 75 ವರ್ಷಗಳ ಅಮೃತ ಮಹೋತ್ಸವದ ಜೊತೆಗೆ, ದೇಶವು ಅಲ್ಲೂರಿ ಸೀತಾರಾಮ ರಾಜು ಅವರ 125 ನೇ ಜಯಂತಿಯನ್ನು ಆಚರಿಸುತ್ತಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಗುವ ‘ರಾಮ ಕ್ರಾಂತಿ’ ಕೂಡ 100 ವರ್ಷ ಪೂರೈಸಿದೆ ಎಂದರು.
ಸೀತಾರಾಮ ರಾಜು ಅವರಿಗೆ ಶ್ರದ್ಧಾಂಜಲಿ ಅರ್ಪಿಸಿದ ಮೋದಿ, ಸೀತಾರಾಮ ರಾಜು ಅವರ ಅದಮ್ಯ ಧೈರ್ಯ ಪ್ರತಿಯೊಬ್ಬ ಭಾರತೀಯರಿಗೆ ಸ್ಫೂರ್ತಿಯಾಗಿದೆ ಎಂದರು.
ಪ್ರಧಾನಮಂತ್ರಿಯವರು ತಮ್ಮ ಭಾಷಣದಲ್ಲಿ ಬ್ರಿಟಿಷರ ಆಳ್ವಿಕೆಯ ವಿರುದ್ಧ ಕೆಚ್ಚೆದೆಯಿಂದ ಹೋರಾಡಿದ ಅಲ್ಲೂರಿ ಸೀತಾರಾಮ ರಾಜು ಅವರ ಮಹಾನ್ ಶೌರ್ಯವನ್ನು ಶ್ಲಾಘಿಸಿದರು.
ನವ ಭಾರತವು ನಮ್ಮ ಸ್ವಾತಂತ್ರ್ಯಕ್ಕಾಗಿ ಪ್ರಾಣ ತೆತ್ತ ಹೋರಾಟಗಾರರ ಕನಸುಗಳ ಭಾರತವಾಗಬೇಕು ಎಂದು ಪ್ರಧಾನಿ ಹೇಳಿದರು. ಕಳೆದ 8 ವರ್ಷಗಳಲ್ಲಿ ಆದಿವಾಸಿಗಳ ಶ್ರೇಯೋಭಿವೃದ್ಧಿಗೆ ಅಲ್ಲೂರಿ ಸೀತಾರಾಮ ರಾಜು ಅವರ ತತ್ವಾದರ್ಶಗಳಲ್ಲಿ ನಡೆದುಕೊಂಡು ಸಂಪೂರ್ಣ ಶ್ರದ್ಧೆಯಿಂದ ಕೆಲಸ ಮಾಡಿದ್ದೇವೆ ಎಂದರು. ಸ್ವಾತಂತ್ರ್ಯದ ನಂತರ ಮೊದಲ ಬಾರಿಗೆ ಬುಡಕಟ್ಟು ಮ್ಯೂಸಿಯಂಗಳನ್ನು ಸ್ಥಾಪಿಸಿ ದೇಶದ ಬುಡಕಟ್ಟು ಜನಾಂಗದ ಹೆಮ್ಮೆ ಮತ್ತು ಪರಂಪರೆಯನ್ನು ಪ್ರದರ್ಶಿಸಲಾಗುತ್ತಿದೆ. ಆಂಧ್ರಪ್ರದೇಶದ ಲಂಬಸಿಂಗಿಯಲ್ಲಿ ಅಲ್ಲೂರಿ ಸೀತಾರಾಮ ರಾಜು ಸ್ಮಾರಕ ಬುಡಕಟ್ಟು ಸ್ವಾತಂತ್ರ್ಯ ಹೋರಾಟಗಾರರ ಮ್ಯೂಸಿಯಂ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.