ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನ ಮಂಗಳೂರು ಇದರ ನೂತನ ವೆಬ್ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ ಮಂಗಳವಾರ ಕಾಶಿ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ಬಿಡುಗಡೆಗೊಂಡಿತು.
ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭಕೃತ ನಾಮ ಸಂವತ್ಸರದ ಚಾತುರ್ಮಾಸದ ವ್ರತಾಚರಣೆಯು ಈ ಬಾರಿ ಶ್ರೀ ದೇವಳದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀ ಸಂಸ್ಥಾನ ಹಾಗೂ ಶ್ರೀ ದೇವಳದಲ್ಲಿ ಹತ್ತು ಹಲವು ಧಾರ್ಮಿಕ ಕಾರ್ಯಕ್ರಮಗಳು, ಯಜ್ಞ ಯಾಗಾದಿಗಳು ಹಾಗೂ ರಾಷ್ಟ್ರೀಯ ಮಟ್ಟದ ಮತ್ತು ರಾಜ್ಯ ಮಟ್ಟದ ಕಲಾವಿದರಿಂದ ಸಾಂಸ್ಕ್ರತಿಕ ಕಾರ್ಯಕ್ರಮಗಳು ನಡೆಯಲಿರುವುದು.
ಈ ಎಲ್ಲಾ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಅನಾನುಕೂಲವಿರುವವರು , ವಿದೇಶ – ದೇಶದ ವಿವಿಧ ಭಾಗಗಳಲ್ಲಿ ವಾಸಿಸಿರುವ ಜಿಎಸ್ಬಿ ಸಮಾಜಬಾಂಧವರಿಗಾಗಿ ಈ ಸಾಮಾಜಿಕ ಜಾಲತಾಣದ ವ್ಯವಸ್ಥೆ ಕಲ್ಪಿಸಲಾಗಿದೆ.
ನೂತನ ವೆಬ್ಸೈಟ್ ಹಾಗೂ ಯೂಟ್ಯೂಬ್ ಚಾನೆಲ್ ಬಿಡುಗಡೆ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಎಂ. ಕಿರಣ್ ಪೈ, ಎಂ. ಸತೀಶ್ ಪ್ರಭು, ಕೆ. ಗಣೇಶ್ ಕಾಮತ್, ಎಂ. ಜಗನ್ನಾಥ್ ಕಾಮತ್, ಚಾತುರ್ಮಾಸ ಸಮಿತಿಯ ಗೌರವಾಧ್ಯಕ್ಷ ಮುಂಡ್ಕುರ್ ರಾಮದಾಸ್ ಕಾಮತ್, ಅಧ್ಯಕ್ಷ ಎಂ. ಪದ್ಮನಾಭ ಪೈ, ಕೋಶಾಧಿಕಾರಿ ಬಿ. ಆರ್. ಭಟ್, ಮಾರೂರ್ ಶಶಿಧರ್ ಪೈ, ಮುಖ್ಯ ಸಂಯೋಜಕ ಸುರೇಶ್ ವಿ. ಕಾಮತ್, ಕಾರ್ಯದರ್ಶಿ ತೋನ್ಸೆ ಗಣಪತಿ ಪೈ, ಉಳ್ಳಾಲ್ ಸುದರ್ಶನ್ ಮಲ್ಯ, ಲೆಕ್ಕ ಪರಿಶೋಧಕರಾದ ಎಂ. ಗೌತಮ್ ನಾಯಕ್, ನರೇಂದ್ರ ಪೈ, ಜಗನ್ನಾಥ್ ನಾಯಕ್, ರಾಮಕೃಷ್ಣ ಪ್ರಭು ಹಾಗೂ ಆನಂದ್ ಭಂಡಾರ್ಕರ್, ಭಾರ್ಗವ್ ಕಾಮತ್ ಉಪಸ್ಥಿತರಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.