ಕುಲ್ಗಾಂ: ಜಮ್ಮು-ಕಾಶ್ಮೀರದ ಗುಲ್ಗಾಮ್ನಲ್ಲಿ ಇಬ್ಬರು ಭಯೋತ್ಪಾದಕರು ಭದ್ರತಾ ಪಡೆಗಳಿಗೆ ಶರಣಾಗಿದ್ದಾರೆ. ಎನ್ಕೌಂಟರ್ ನಡೆಯುತ್ತಿದ್ದ ಸಂದರ್ಭದಲ್ಲಿ ಪೋಷಕರು ಮಾಡಿದ ಮನವಿಯನ್ನು ಕೇಳಿ ಈ ಭಯೋತ್ಪಾದಕರು ಪೊಲೀಸರ ಎದುರು ಶರಣಾಗಿದ್ದಾರೆ.
ಶರಣಾಗತರಾದ ಉಗ್ರರ ಬಳಿಯಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದು ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.
ಪ್ರತಿ ಬಾರಿಯೂ ಎನ್ಕೌಂಟರ್ ನಡೆಯುವ ಸಂದರ್ಭದಲ್ಲಿ ಯೋಧರು ಭಯೋತ್ಪಾದಕರಿಗೆ ಶರಣಾಗುವ ಅವಕಾಶವನ್ನು ನೀಡುತ್ತಾರೆ. ಆದರೆ ಶರಣಾಗಲು ನಿರಾಕರಿಸುವ ಉಗ್ರರು ಪರಲೋಕದ ಹಾದಿ ಹಿಡಿಯುತ್ತಾರೆ.
ಇತ್ತೀಚಿನ ದಿನಗಳಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಅಂಡ್ ಕೌಂಟರ್ ನಿತ್ಯದ ಕಾರ್ಯವಾಗಿದ್ದು, ಭಯೋತ್ಪಾದಕರನ್ನು ಬುಡ ಸಮೇತ ನಿರ್ಮೂಲನೆ ಮಾಡಲು ಯೋಧರು ಅವಿರತವಾಗಿ ಶ್ರಮಿಸುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.