ನವದೆಹಲಿ: ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಇಂದು ಗ್ವಾಲಿಯರ್ನಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ರಿಸರ್ಚ್ ಆನ್ ಇಂಟರ್ನ್ಯಾಷನಲ್ ಎಕನಾಮಿಕ್ ರಿಲೇಶನ್ಸ್ (ICRIER) ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ (NSE) ಜಂಟಿ ಸಮ್ಮೇಳನವನ್ನು ವರ್ಚುವಲ್ ಆಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ತೋಮರ್ ಮಾತನಾಡಿ, ರೈತ ಸಹೋದರ ಸಹೋದರಿಯರ ಪರಿಶ್ರಮ ಮತ್ತು ಸರ್ಕಾರದ ರೈತ ಸ್ನೇಹಿ ನೀತಿಗಳ ಫಲವಾಗಿ ಇಂದು ಭಾರತವು ಹೆಚ್ಚಿನ ಕೃಷಿ ಉತ್ಪನ್ನಗಳ ಉತ್ಪಾದನೆಯಲ್ಲಿ ವಿಶ್ವದ ಮೊದಲ ಎರಡು ಉತ್ಪಾದಕರ ಸಾಲಿನಲ್ಲಿ ನಿಂತಿದೆ. ಭಾರತದ ಸಾವಯವ ಉತ್ಪನ್ನಗಳಿಗೆ ಪ್ರಪಂಚದಾದ್ಯಂತ ಬೇಡಿಕೆಯಿದೆ ಮತ್ತು ಕರೋನಾ ಸಾಂಕ್ರಾಮಿಕದಂತಹ ಪ್ರತಿಕೂಲ ಪರಿಸ್ಥಿತಿಗಳ ಹೊರತಾಗಿಯೂ ಭಾರತದಿಂದ ಕೃಷಿ ರಫ್ತು ರೂ. 3.75 ಲಕ್ಷ ಕೋಟಿ ತಲುಪಿದ್ದು, ಉತ್ತಮ ಸಂಕೇತವಾಗಿದೆ. ಇಂತಹ ಸನ್ನಿವೇಶದಲ್ಲಿ, ನಾವು ನಮ್ಮ ಕೃಷಿ ಉತ್ಪನ್ನಗಳ ಗುಣಮಟ್ಟವನ್ನು ಉಳಿಸಿಕೊಳ್ಳಬೇಕು ಮತ್ತು ಅದು ಜಾಗತಿಕ ಮಾನದಂಡಗಳನ್ನು ಪೂರೈಸುತ್ತದೆ ಎಂದು ಖಚಿತಪಡಿಸಿಕೊಳ್ಳಬೇಕು ಎಂದಿದ್ದಾರೆ.
ಭಾರತವು ವೈವಿಧ್ಯಮಯ ಹವಾಮಾನವನ್ನು ಹೊಂದಿರುವ ದೇಶವಾಗಿದ್ದು, ಕೃಷಿಗೆ ಅತ್ಯಂತ ಅನುಕೂಲಕರ ವಾತಾವರಣದ ಸಾಧ್ಯತೆಯಿದೆ ಎಂದಿದ್ದಾರೆ.
“ನಮ್ಮ ಕೃಷಿ ಕ್ಷೇತ್ರವು ಅತ್ಯಂತ ಬಲಿಷ್ಠವಾಗಿದೆ, ಇದು ಪ್ರತಿಕೂಲ ಪರಿಸ್ಥಿತಿಯಲ್ಲೂ ಎತ್ತರದಲ್ಲಿದೆ. ಇತ್ತೀಚೆಗೆ, ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ, ಇಡೀ ಜಗತ್ತು ಬಹುತೇಕ ಸ್ಥಗಿತಗೊಂಡಾಗ, ಲಾಕ್ಡೌನ್ ಹೊರತಾಗಿಯೂ, ಬಿತ್ತನೆ, ಕಟಾವು, ಮಾರುಕಟ್ಟೆ ಮುಂತಾದ ಎಲ್ಲಾ ಕೃಷಿ ಚಟುವಟಿಕೆಗಳು ಅಡೆತಡೆಯಿಲ್ಲದೆ ಮುಂದುವರೆಯಿತು.ಭಾರತೀಯ ಕೃಷಿ ಕ್ಷೇತ್ರವು ವಿಶಾಲವಾಗಿದೆ ಮತ್ತು ನಮ್ಮ ಜನಸಂಖ್ಯೆಯ ಬಹುಪಾಲು ಕೃಷಿಯ ಮೇಲೆ ಅವಲಂಬಿತವಾಗಿದೆ, ಆದ್ದರಿಂದ ಅದರ ಪ್ರಗತಿಗಾಗಿ ಸರ್ಕಾರವು ಅಗತ್ಯ ಬದಲಾವಣೆಗಳನ್ನು ಮಾಡಿದೆ ಮತ್ತು ವಿದ್ವಾಂಸರು ತಮ್ಮ ಸಲಹೆಗಳ ಮೂಲಕ ಸರ್ಕಾರವನ್ನು ಬೆಂಬಲಿಸುತ್ತಾರೆ, ಇವೆಲ್ಲವೂ ಕೃಷಿ ಕ್ಷೇತ್ರಕ್ಕೆ ಪ್ರಯೋಜನವನ್ನು ನೀಡುತ್ತದೆ. ಕಳೆದ 8 ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಕೃಷಿಯ ಅಭಿವೃದ್ಧಿ ಮತ್ತು ನಿರ್ವಹಣೆಗಾಗಿ ಹಲವಾರು ಉಪಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.