ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಸಂಜೆ 6.30ಕ್ಕೆ ನವದೆಹಲಿಯಲ್ಲಿ ನಡೆಯಲಿರುವ ಮೊದಲ ‘ಅರುಣ್ ಜೇಟ್ಲಿ ಸ್ಮಾರಕ ಉಪನ್ಯಾಸ’ (ಎಜೆಎಂಎಲ್) ನಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದ ವೇಳೆ ಪ್ರಧಾನಮಂತ್ರಿ ಅವರು ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆರ್ಥಿಕ ವ್ಯವಹಾರಗಳ ಇಲಾಖೆಯು ರಾಷ್ಟ್ರಕ್ಕೆ ಜೇಟ್ಲಿ ಅಮೂಲ್ಯ ಕೊಡುಗೆಯನ್ನು ಗುರುತಿಸಿ ಉಪನ್ಯಾಸವನ್ನು ಆಯೋಜಿಸಿದೆ.
ಮೊದಲ ‘ಅರುಣ್ ಜೇಟ್ಲಿ ಸ್ಮಾರಕ ಉಪನ್ಯಾಸ’ದಲ್ಲಿ ಮುಖ್ಯ ಭಾಷಣವನ್ನು ಸಿಂಗಾಪುರ ಸರ್ಕಾರದ ಹಿರಿಯ ಸಚಿವ ಥರ್ಮನ್ ಷಣ್ಮುಗರತ್ನಂ ಅವರು ಮಾಡಲಿದ್ದಾರೆ. ‘ಒಳಗೊಳ್ಳುವಿಕೆಯ ಮೂಲಕ ಬೆಳವಣಿಗೆ, ಬೆಳವಣಿಗೆಯ ಮೂಲಕ ಒಳಗೊಳ್ಳುವಿಕೆ’ ಕುರಿತು ಭಾಷಣ ಮಾಡಲಿದ್ದಾರೆ.
ಇಂದಿನಿಂದ ಮೂರು ದಿನಗಳ ಕಾಲ ಆಯೋಜಿಸಲಾಗಿರುವ ಕೌಟಿಲ್ಯ ಆರ್ಥಿಕ ಸಮಾವೇಶದಲ್ಲಿ (ಕೆಇಸಿ) ಭಾಗವಹಿಸುವ ಪ್ರತಿನಿಧಿಗಳೊಂದಿಗೂ ಪ್ರಧಾನಿ ಮೋದಿ ಸಂವಾದ ನಡೆಸಲಿದ್ದಾರೆ. ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾನಿಲಯದ ಅನ್ನೆ ಕ್ರೂಗರ್, ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ನ ನಿಕೋಲಸ್ ಸ್ಟರ್ನ್, ಹಾರ್ವರ್ಡ್ ಕೆನಡಿ ಸ್ಕೂಲ್ನ ರಾಬರ್ಟ್ ಲಾರೆನ್ಸ್, ಅಂತರರಾಷ್ಟ್ರೀಯ ಹಣಕಾಸು ನಿಧಿಯ ಮಾಜಿ ಕಾರ್ಯನಿರ್ವಾಹಕ ನಿರ್ದೇಶಕ ಜಾನ್ ಲಿಪ್ಸ್ಕಿ ಮತ್ತು ವರ್ಲ್ಡ್ ಅವರನ್ನು ಪ್ರಧಾನ ಮಂತ್ರಿ ಭೇಟಿಯಾಗಲಿರುವ ಖ್ಯಾತ ಅರ್ಥಶಾಸ್ತ್ರಜ್ಞರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.