ನವದೆಹಲಿ: ವಿದೇಶಾಂಗ ಸಚಿವ ಡಾ. ಎಸ್. ಜೈಶಂಕರ್ ಅವರು ಜಿ-20 ವಿದೇಶಾಂಗ ಸಚಿವರ ಸಭೆಯ ಸಂದರ್ಭದಲ್ಲಿ ಬಾಲಿಯಲ್ಲಿ ರಷ್ಯಾದ ವಿದೇಶಾಂಗ ಸಚಿವ ಸೆರ್ಗೆಯ್ ಲಾವ್ರೊವ್ ಅವರನ್ನು ಭೇಟಿಯಾದರು. ಉಭಯ ನಾಯಕರು ಪರಸ್ಪರ ಹಿತಾಸಕ್ತಿಯ ದ್ವಿಪಕ್ಷೀಯ ವಿಷಯಗಳ ಕುರಿತು ಚರ್ಚಿಸಿದರು.
ಉಕ್ರೇನ್ ಸಂಘರ್ಷ ಮತ್ತು ಅಫ್ಘಾನಿಸ್ಥಾನ ಸೇರಿದಂತೆ ಸಮಕಾಲೀನ ಪ್ರಾದೇಶಿಕ ಮತ್ತು ಅಂತರರಾಷ್ಟ್ರೀಯ ವಿಷಯಗಳ ಬಗ್ಗೆ ಅಭಿಪ್ರಾಯಗಳನ್ನು ಉಭಯ ನಾಯಕರು ವಿನಿಮಯ ಮಾಡಿಕೊಂಡರು ಎಂದು ಮೂಲಗಳು ತಿಳಿಸಿವೆ.
ಇನ್ನು ಉಳಿದಂತೆ ಬಾಲಿಯಲ್ಲಿ ನಡೆ ಶೃಂಗಸಭೆಯಲ್ಲಿ ವಿದೇಶಾಂಗ ಮಂತ್ರಿಗಳು ಸಮಕಾಲೀನ ಪ್ರಸ್ತುತತೆಯ ವಿಷಯಗಳ ಬಗ್ಗೆ ಚರ್ಚಿಸುತ್ತಿದ್ದಾರೆ. ಬಹುಪಕ್ಷೀಯತೆಯನ್ನು ಬಲಪಡಿಸುವುದು ಮತ್ತು ಆಹಾರ ಮತ್ತು ಇಂಧನ ಭದ್ರತೆ ಸೇರಿದಂತೆ ಪ್ರಸ್ತುತ ಜಾಗತಿಕ ಸವಾಲುಗಳು ಚರ್ಚೆಗೊಳಪಟ್ಟಿವೆ.
G-20 ಸದಸ್ಯರು ವಿಶ್ವದ GDP ಯ 80 ಪ್ರತಿಶತಕ್ಕಿಂತ ಹೆಚ್ಚು, ಅಂತರರಾಷ್ಟ್ರೀಯ ವ್ಯಾಪಾರದ 75 ಪ್ರತಿಶತ ಮತ್ತು ವಿಶ್ವ ಜನಸಂಖ್ಯೆಯ 60 ಪ್ರತಿಶತವನ್ನು ಪ್ರತಿನಿಧಿಸುತ್ತಾರೆ.
ಈ ವರ್ಷದ ಮೇ ತಿಂಗಳಲ್ಲಿ, ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ ಅವರನ್ನು 2023 ರಲ್ಲಿ ಭಾರತ ಆಯೋಜಿಸಲಿರುವ G-20 ಶೃಂಗಸಭೆಯ ಸಂಯೋಜಕರಾಗಿ ನೇಮಿಸಲಾಯಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.