ಶ್ರೀನಗರ: ದಕ್ಷಿಣ ಕಾಶ್ಮೀರದ ಅಮರನಾಥದ ಪವಿತ್ರ ಗುಹಾ ದೇಗುಲದ ಬಳಿ ನಿನ್ನೆ ವಿನಾಶಕಾರಿ ಮೇಘಸ್ಫೋಟ ಸಂಭವಿಸಿದ್ದು, ಈ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ. ವರದಿಗಳ ಪ್ರಕಾರ, ಪವಿತ್ರ ಗುಹೆ ಪ್ರದೇಶದ ಬಳಿ ಸಿಲುಕಿರುವ ಹೆಚ್ಚಿನ ಯಾತ್ರಾರ್ಥಿಗಳನ್ನು ಪಂಜತರ್ನಿಗೆ ಸ್ಥಳಾಂತರಿಸಲಾಗಿದೆ.
ದಕ್ಷಿಣ ಕಾಶ್ಮೀರದ ಹಿಮಾಲಯದ ಅಮರನಾಥ ಗುಹೆಯ ಬಳಿ ಶುಕ್ರವಾರ ಸಂಜೆ ಸಂಭವಿಸಿದ ಮೇಘಸ್ಫೋಟದಲ್ಲಿ ಕನಿಷ್ಠ 15 ಜನರು ಸಾವನ್ನಪ್ಪಿದ್ದಾರೆ ಮತ್ತು 40 ಜನರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ, 25 ಡೇರೆಗಳು ಮತ್ತು ಮೂರು ಸಮುದಾಯ ಅಡುಗೆಮನೆಗಳಿಗೆ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲೀಸ್ (ITBP) ಮಾರ್ಗವನ್ನು ತೆರವುಗೊಳಿಸುವ ಮತ್ತು ಪವಿತ್ರ ಗುಹೆಯಿಂದ ಜನರನ್ನು ರಕ್ಷಿಸುವ ಕಾರ್ಯಗಳನ್ನು ವಿಸ್ತರಿಸಿದೆ. ಪ್ರಸ್ತುತ ಯಾವುದೇ ಯಾತ್ರಿಕರು ಸಿಲುಕಿಕೊಂಡಿಲ್ಲ ಮತ್ತು 15,000 ಕ್ಕೂ ಹೆಚ್ಚು ಜನರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಮೇಘಸ್ಫೋಟದ ವಿಡಿಯೋ ಹೊರಬಿದ್ದಿದ್ದು, ಪ್ರವಾಹವು ವೇಗವಾಗಿ ಹರಿಯುತ್ತಿದೆ. ITBP ಪ್ರಕಾರ, ಮೇಲ್ಭಾಗದಲ್ಲಿ ಭಾರೀ ಮಳೆ ಸಂಭವಿಸಿದ ನಂತರ ಗುಹೆಯ ಮೇಲಿನಿಂದ ನೀರು ಹರಿದು ಬಂದಿದೆ.
Rescue operation has been intensified, around 30-40 people are still missing. The weather is clear near #Amarnath cave. The injured people have been brought to base using helicopters. Yatra is still on hold & we're advising people not to move ahead: Vivek Kumar Pandey, PRO, ITBP pic.twitter.com/pUrCyFZHlr
— ANI (@ANI) July 9, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.