ನವದೆಹಲಿ: ಉಧಯ್ಪುರದಲ್ಲಿ ಕನ್ಹಯ್ಯ ಲಾಲ್ ಮತ್ತು ಅಮರಾವತಿಯಲ್ಲಿ ಔಷಧಿ ವ್ಯಾಪಾರಿಯ ಹತ್ಯೆಯನ್ನು ಖಂಡಿಸಿ ಇಂದು ದೆಹಲಿಯಲ್ಲಿ ಹಿಂದೂ ಸಂಘಟನೆಗಳು ʼಸಂಕಲ್ಪ್ ಮಾರ್ಚ್ʼ ಪ್ರತಿಭಟನೆಯನ್ನು ನಡೆಸಿವೆ
ತ್ರಿವರ್ಣ ಧ್ವಜವನ್ನು ಬೀಸುತ್ತಾ, ‘ಜೈ ಶ್ರೀ ರಾಮ್’ ಎಂದು ಘೋಷಣೆಗಳನ್ನು ಕೂಗುತ್ತಾ ಹಿಂದೂ ಸಂಘಟನೆಯ ಕಾರ್ಯಕರ್ತರು ಹಿಂದೂ ಸಮುದಾಯದ ಮೇಲಿನ ದಾಳಿಯ ವಿರುದ್ಧ ಪ್ರತಿಭಟಿಸಿದ್ದಾರೆ.
ವಿವಿಧ ಹಿಂದೂ ಸಂಘಟನೆಗಳು ಆಯೋಜಿಸಿದ್ದ ಈ ‘ಸಂಕಲ್ಪ ಮಾರ್ಚ್’ ನಲ್ಲಿ ಹಲವಾರು ಜನರು ಭಾಗವಹಿಸಿದ್ದರು. ಮೆರವಣಿಗೆಯು ಮಂಡಿ ಹೌಸ್ ಪ್ರದೇಶದಿಂದ ಪ್ರಾರಂಭವಾಯಿತು ಮತ್ತು ಜಂತರ್ ಮಂತರ್ನಲ್ಲಿ ಮುಕ್ತಾಯಗೊಳ್ಳಲಿದೆ.
ಬಿಜೆಪಿ ನಾಯಕರಾದ ತಜೀಂದರ್ ಪಾಲ್ ಸಿಂಗ್ ಬಗ್ಗಾ ಮತ್ತು ಕಪಿಲ್ ಮಿಶ್ರಾ ಕೂಡ ಮೆರವಣಿಗೆಯಲ್ಲಿ ಉಪಸ್ಥಿತರಿದ್ದರು.
ಉತ್ತರ ದೆಹಲಿಯ ಮಾಜಿ ಮೇಯರ್ ಅವತಾರ್ ಸಿಂಗ್ ಮಾತನಾಡಿ, “ಸಂಕಲ್ಪ ಮಾರ್ಚ್’ ಗಾಗಿ ಇಂದು ಬಹು ಹಿಂದೂ ಗುಂಪುಗಳು ಬೀದಿಗಿಳಿದಿವೆ. ನಾವು ಹಿಂದೂಗಳ ಮೇಲಿನ ದಾಳಿಯ ವಿರುದ್ಧ ಧ್ವನಿ ಎತ್ತಲು ಬಂದಿದ್ದೇವೆ. ಆ ರೀತಿಯಲ್ಲಿ ಹಿಂದೂಗಳನ್ನು ಗುರಿಯಾಗಿಸಲು ಅಥವಾ ದಾಳಿ ಮಾಡಲು ಸಾಧ್ಯವಿಲ್ಲ. ನಾವು ಗೆಲ್ಲುತ್ತೇವೆ. ನಮ್ಮನ್ನು ಗುರಿಯಾಗಿಸುವವರನ್ನು ಬಿಡುವುದಿಲ್ಲ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.