ನವದೆಹಲಿ: 9,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿ ಭಾರತದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ ಅವರಿಗೆ ಇದೀಗ ಮತ್ತೊಂದು ಸಂಕಷ್ಟ ಎದುರಾಗಿದೆ. ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಸುಪ್ರೀಂಕೋರ್ಟ್ ಸೋಮವಾರ ನಾಲ್ಕು ತಿಂಗಳ ಶಿಕ್ಷೆಯನ್ನು ಅವರಿಗೆ ವಿಧಿಸಿದೆ.
2017ರಲ್ಲಿ ನ್ಯಾಯಾಲಯದಿಂದ ಮಾಹಿತಿ ಮುಚ್ಚಿಟ್ಟಿದ್ದಕ್ಕಾಗಿ ನ್ಯಾಯಾಂಗ ನಿಂದನೆ ಆರೋಪಿ ದಡಿ ತಪ್ಪಿಸ್ಥರೆಂದು ಸಾಬೀತಾದ ವಿಜಯ ಮಲ್ಯ ಅವರಿಗೆ ಸುಪ್ರೀಂ ಕೋರ್ಟ್ ಶಿಕ್ಷೆ ಮತ್ತು 2,000 ರೂಪಾಯಿ ದಂಡ ವಿಧಿಸಿದೆ.
ನ್ಯಾಯಮೂರ್ತಿ ಯು.ಯು.ಲಲಿತ್ ನೇತೃತ್ವದ ಪೀಠವು ಮಲ್ಯ ಅವರಿಗೆ ಶಿಕ್ಷೆ ಸಮೇತ ದಂಡವನ್ನೂ ವಿಧಿಸಿದೆ.
ಮಾತ್ರವಲ್ಲದೆ ನ್ಯಾಯಾಲಯದ ಆದೇಶ ಮೀರಿ ವರ್ಗಾವಣೆಯಾಗಿರುವ 40 ಮಿಲಿಯನ್ ಡಾಲರ್ ಹಣವನ್ನು ಹಿಂತೆಗೆಯುವಂತೆ ಮಲ್ಯ ಕುಟುಂಬ ವರ್ಗದವರಿಗೆ ಕೋರ್ಟ್ ಸೂಚನೆ ನೀಡಿದೆ.
ನ್ಯಾಯಾಲಯದ ಆದೇಶಗಳನ್ನು ಉಲ್ಲಂಘಿಸಿ ತನ್ನ ಮಕ್ಕಳಿಗೆ USD 40 ಮಿಲಿಯನ್ ವರ್ಗಾಯಿಸಿದ್ದಕ್ಕಾಗಿ 2017ರ ತೀರ್ಪನ್ನು ಅವಹೇಳನಕಾರಿಯಾಗಿ ಪರಿಗಣಿಸಿದ ಮಲ್ಯ ಅವರ ಮನವಿಯನ್ನು ಸುಪ್ರೀಂಕೋರ್ಟ್ 2020 ರಲ್ಲಿ ವಜಾಗೊಳಿಸಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.