ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಜುಲೈ 21 ರಂದು ತನ್ನ ಮುಂದೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯ (ಇಡಿ) ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಹೊಸ ಸಮನ್ಸ್ ಜಾರಿ ಮಾಡಿದೆ.
ಜುಲೈ 21 ರಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ದೆಹಲಿಯ ಪ್ರಧಾನ ಕಚೇರಿಯಲ್ಲಿ ತನಿಖಾಧಿಕಾರಿಗಳ ಮುಂದೆ ಸೋನಿಯಾ ಗಾಂಧಿ ಅವರನ್ನು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಕೋವಿಡ್-19 ಕಾರಣದಿಂದಾಗಿ ಸೋನಿಯಾ ಗಾಂಧಿ ಅವರಿಗೆ ಪ್ರಕರಣದಲ್ಲಿ ಇಡಿ ತನಿಖೆಗೆ ಸೇರಲು ಇದುವರೆಗೆ ಸಾಧ್ಯವಾಗದ ಹಿನ್ನೆಲೆಯಲ್ಲಿ ಹೊಸ ಸಮನ್ಸ್ ಜಾರಿಗೊಳಿಸಲಾಗಿದೆ. ಈ ಹಿಂದೆ ಜೂನ್ 8 ರಂದು ಮತ್ತು ನಂತರ ಜೂನ್ 21 ರಂದು ತನಿಖಾಧಿಕಾರಿಗಳ ಮುಂದೆ ಹಾಜರಾಗಲು ಅವರಿಗೆ ಸಮನ್ಸ್ ನೀಡಲಾಗಿತ್ತು.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಸೋನಿಯಾ ಗಾಂಧಿ ಅವರ ಹೇಳಿಕೆಗಳನ್ನು ದಾಖಲಿಸಲು ಇಡಿ ಬಯಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಕಳೆದ ತಿಂಗಳು ರಾಹುಲ್ ಗಾಂಧಿ ಅವರನ್ನು ವಿಚಾರಣೆಗೊಳಪಡಿಸಿತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.