ಟೊರೆಂಟೋ: ಕೆನಡಾದ ಒಂಟಾರಿಯೊದ ರಿಚ್ಮಂಡ್ ಹಿಲ್ ನಗರದಲ್ಲಿ ಮಹಾತ್ಮ ಗಾಂಧಿಯವರ ಪ್ರತಿಮೆಯನ್ನು ಅಪವಿತ್ರಗೊಳಿಸಲಾಗಿದ್ದು, ಈ ಬಗ್ಗೆ ಭಾರತವು ಬುಧವಾರ ತೀವ್ರ ಸ್ವರೂಪದ ಆಕ್ರೋಶವನ್ನು ವ್ಯಕ್ತಪಡಿಸಿದೆ.
ಯೋಂಗ್ ಸ್ಟ್ರೀಟ್ ಆಂಡ್ ಗಾರ್ಡನ್ ಅವೆನ್ಯೂ ಪ್ರದೇಶದಲ್ಲಿನ ವಿಷ್ಣು ಮಂದಿರದ ಆವರಣದಲ್ಲಿರುವ ಪ್ರತಿಮೆಯನ್ನು ಧ್ವಂಸಗೊಳಿಸಲಾಗಿದೆ ಎಂದು ಕೆನಡಾದ ಬ್ರಾಡ್ಕಾಸ್ಟಿಂಗ್ ಕಾರ್ಪೊರೇಷನ್ (ಸಿಬಿಸಿ) ಯಾರ್ಕ್ ಪ್ರಾದೇಶಿಕ ಪೊಲೀಸರು ತಿಳಿಸಿದ್ದಾರೆ.
“ರಿಚ್ಮಂಡ್ ಹಿಲ್ನಲ್ಲಿರುವ ವಿಷ್ಣು ದೇವಾಲಯದಲ್ಲಿ ಮಹಾತ್ಮ ಗಾಂಧಿ ಪ್ರತಿಮೆಗೆ ಅವಮಾನ ಮಾಡಲಾಗಿದ್ದು, ಈ ಘಟನೆಯಿಂದ ನಾವು ದುಃಖಿತರಾಗಿದ್ದೇವೆ. ಈ ಕ್ರಿಮಿನಲ್, ದ್ವೇಷಪೂರಿತ ವಿಧ್ವಂಸಕ ಕೃತ್ಯವು ಕೆನಡಾದ ಭಾರತೀಯ ಸಮುದಾಯದ ಭಾವನೆಗಳನ್ನು ಆಳವಾಗಿ ಘಾಸಿಗೊಳಿಸಿದೆ. ಈ ದ್ವೇಷದ ಅಪರಾಧದ ತನಿಖೆಗಾಗಿ ನಾವು ಕೆನಡಾದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದೇವೆ” ಎಂದು ಟೊರೊಂಟೊದಲ್ಲಿರುವ ಭಾರತೀಯ ಕಾನ್ಸುಲೇಟ್ ಜನರಲ್ ಟ್ವೀಟ್ ಮಾಡಿದ್ದಾರೆ.
ಭಾರತೀಯ ಸಮುದಾಯವನ್ನು ಭಯಭೀತಗೊಳಿಸಲು ಪ್ರಯತ್ನಿಸುತ್ತಿರುವ ಈ ದ್ವೇಷದ ಅಪರಾಧದಿಂದ ಭಾರತವು ತೀವ್ರವಾಗಿ ನೊಂದಿದೆ ಎಂದು ಒಟ್ಟಾವಾದಲ್ಲಿನ ಹೈಕಮಿಷನ್ ಹೇಳಿದೆ. ತನಿಖೆ ಮತ್ತು ಅಪರಾಧಿಗಳನ್ನು ತ್ವರಿತವಾಗಿ ನ್ಯಾಯಾಂಗಕ್ಕೆ ಎಳೆದು ತರುವುದನ್ನು ಖಚಿತಪಡಿಸಿಕೊಳ್ಳಲು ಭಾರತವು ಕೆನಡಾ ಸರ್ಕಾರವನ್ನು ಸಂಪರ್ಕಿಸಿದೆ ಎಂದು ಅದು ಹೇಳಿದೆ.
“ಸ್ಥಳೀಯ ಪೊಲೀಸರು ಇದನ್ನು ದ್ವೇಷ ಮತ್ತು “ಪಕ್ಷಪಾತ ಪ್ರೇರಿತ ಘಟನೆ” ಎಂದು ಬಣ್ಣಿಸಿದ್ದಾರೆ. ಪ್ರತಿಮೆ ಮೇಲೆ ಅತ್ಯಾಚಾರಿ ಮತ್ತು ಖಲಿಸ್ತಾನ್ ಸೇರಿದಂತೆ ಅವಹೇಳನಕಾರಿ ಪದಗಳನ್ನು ಬರೆದು ಪ್ರತಿಮೆಯನ್ನು ವಿರೂಪಗೊಳಿಸಿದ್ದಾರೆ” ಎಂದು ಯಾರ್ಕ್ ಪ್ರಾದೇಶಿಕ ಪೊಲೀಸ್ ವಕ್ತಾರ ಕಾನ್ಸ್ಟೆಬಲ್ ಆಮಿ ಬೌಡ್ರೊ ಹೇಳಿದ್ದಾರೆ.
“ಯಾರ್ಕ್ ಪ್ರಾದೇಶಿಕ ಪೊಲೀಸರು ಯಾವುದೇ ರೂಪದಲ್ಲಿ ದ್ವೇಷದ ಅಪರಾಧವನ್ನು ಸಹಿಸುವುದಿಲ್ಲ” ಎಂದು ಬೌಡ್ರೊ ಹೇಳಿದರು.
“ಜನಾಂಗ, ರಾಷ್ಟ್ರೀಯತೆ, ಭಾಷೆ, ಬಣ್ಣ, ಧರ್ಮ, ವಯಸ್ಸು, ಲಿಂಗ ಮುಂತಾದವುಗಳ ಆಧಾರದ ಮೇಲೆ ಇತರರನ್ನು ಬಲಿಪಶು ಮಾಡುವವರನ್ನು ಕಾನೂನಿನ ಪೂರ್ಣ ಪ್ರಮಾಣದಲ್ಲಿ ವಿಚಾರಣೆಗೆ ಒಳಪಡಿಸಲಾಗುತ್ತದೆ” ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.