ಪಾಟ್ನಾ: ಬಿಹಾರದ ರಾಜಧಾನಿ ಪಾಟ್ನಾದಲ್ಲಿ ದೇಶವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ್ದ ಇಬ್ಬರು ಭಯೋತ್ಪಾದಕರನ್ನು ಬಂಧಿಸಲಾಗಿದೆ. ಬಂಧಿತ ಭಯೋತ್ಪಾದಕರಲ್ಲಿ ಒಬ್ಬ ಜಾರ್ಖಂಡ್ ಪೊಲೀಸ್ನ ನಿವೃತ್ತ ಪೊಲೀಸ್ ಅಧಿಕಾರಿ ಮೊಹಮ್ಮದ್ ಜಲಾಲುದ್ದೀನ್, ಇನ್ನೊಬ್ಬ ಪಿಎಫ್ಐ ಸದಸ್ಯ ಅಥರ್ ಪರ್ವೇಜ್.
ಪಾಟ್ನಾ ಪೊಲೀಸರ ಪ್ರಕಾರ, ಇಬ್ಬರೂ ಮಾರ್ಷಲ್ ಆರ್ಟ್ಸ್ ನೆಪದಲ್ಲಿ ಭಯೋತ್ಪಾದಕ ತರಬೇತಿ ನೀಡುತ್ತಿದ್ದರು. ಇವರ ಬಳಿ ಪಿಎಫ್ಐ-ಎಸ್ಡಿಪಿಐನ ‘ಮಿಷನ್ 2047’ ಎಂಬ ರಹಸ್ಯ ದಾಖಲೆ ಪತ್ತೆಯಾಗಿದ್ದು, ಅದರಲ್ಲಿ 2047ರ ವೇಳೆಗೆ ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡುವುದಾಗಿ ಉಲ್ಲೇಖಿಸಲಾಗಿದೆ. ಜುಲೈ 12ರ ಭೇಟಿ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಗುರಿಯಾಗಿಸುವ ಸಂಚು ಕೂಡ ನಡೆದಿತ್ತು ಎಂಬುದು ಇದರಲ್ಲಿ ಬಯಲಾಗಿದೆ.
ಪ್ರಧಾನಿ ಮೋದಿ ಅವರ ಭೇಟಿಗೆ 15 ದಿನಗಳ ಮೊದಲು ಶಂಕಿತ ಭಯೋತ್ಪಾದಕರಿಗೆ ಫುಲ್ವಾರಿ ಷರೀಫ್ನಲ್ಲಿ ತರಬೇತಿ ನೀಡಲಾಗುತ್ತಿತ್ತು. ಅವರು ಜುಲೈ 6 ಮತ್ತು 7 ರಂದು ಪ್ರಧಾನಿ ಮೋದಿಯನ್ನು ಗುರಿಯಾಗಿಸಲು ಸಂಚು ರೂಪಿಸಲು ಸಭೆಗಳನ್ನು ನಡೆಸಿದ್ದರು. ಶಂಕಿತ ಉಗ್ರನ ಫುಲ್ವಾರಿ ಷರೀಫ್ ಕಚೇರಿ ಮೇಲೆ ಬಿಹಾರ ಪೊಲೀಸರು ದಾಳಿ ನಡೆಸಿದ್ದಾರೆ. ಈ ಇಬ್ಬರ ಬಳಿ ತರಬೇತಿ ಪಡೆಯಲು ಕಳೆದ ಎರಡು ತಿಂಗಳಿನಿಂದ ಬೇರೆ ರಾಜ್ಯದವರು ಬರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಆರೋಪಿಯು ಜುಲೈ 6-7 ರಂದು ಸ್ಥಳೀಯ ಜನರಿಗೆ ಮಾರ್ಷಲ್ ಆರ್ಟ್ಸ್ ಹೆಸರಿನಲ್ಲಿ ಕತ್ತಿ ಮತ್ತು ಚಾಕುಗಳನ್ನು ಬಳಸಲು ಕಲಿಸಿದ್ದ. ಅವರು ಯುವಕರನ್ನು ಧಾರ್ಮಿಕ ಹಿಂಸಾಚಾರಕ್ಕೆ ಪ್ರಚೋದಿಸಿದ್ದರು. ಸಿಸಿಟಿವಿ ದೃಶ್ಯಾವಳಿಗಳು ಹಾಗೂ ಸಾಕ್ಷಿಗಳ ವಿವರಗಳು ನಮ್ಮ ಬಳಿ ಇವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭಯೋತ್ಪಾದಕ ಚಟುವಟಿಕೆಗಳನ್ನು ನಡೆಸಲು ಪರ್ವೇಜ್ ಲಕ್ಷಾಂತರ ರೂಪಾಯಿ ದೇಣಿಗೆ ಸಂಗ್ರಹಿಸಿದ್ದ. ‘ಇಂಡಿಯಾ ವಿಷನ್ 2047’ ಶೀರ್ಷಿಕೆಯ 8 ಪುಟಗಳ ಸುದೀರ್ಘ ದಾಖಲೆಯ ಆಯ್ದ ಭಾಗವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.