ಬೆಂಗಳೂರು: ದಕ್ಷಿಣ ಭಾರತದ ಮೊದಲ ನ್ಯಾನೋ ಯೂರಿಯಾ ಘಟಕ ಬೆಂಗಳೂರಿನ ದೇವನಹಳ್ಳಿ ತಾಲ್ಲೂಕಿನ ನಾಗನಾಯಕನಹಳ್ಳಿಯಲ್ಲಿ ಸ್ಥಾಪನೆಯಾಗುತ್ತಿದೆ.
ಇಫ್ಕೋ ಸಂಸ್ಥೆಯಿಂದ ಸ್ಥಾಪಿತಗೊಳ್ಳಲಿರುವ ಈ ಘಟಕವು ದಕ್ಷಿಣ ಭಾರತದ ರಾಜ್ಯಗಳಿಗೆ ನ್ಯಾನೋ ಯೂರಿಯಾ ಬೇಡಿಕೆಯನ್ನು ಪೂರೈಸಲಿದೆ.
ನ್ಯಾನೋ ಯೂರಿಯಾ ಘಟಕ ಸ್ಥಾಪಿಸುವ ಕಾಮಗಾರಿಯನ್ನು ಎರಡು ವರ್ಷದಲ್ಲಿ ಪೂರ್ಣಗೊಳಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಸಗೊಬ್ಬರ ಸಚಿವರ ಮೂಲಕ ಕೇಂದ್ರ ಸರಕಾರಕ್ಕೆ ಮನವಿ ಮಾಡಿದ್ದಾರೆ.
ರಾಜ್ಯ ಸರ್ಕಾರ ಯೂರಿಯಾ ಘಟಕಕ್ಕೆ 12 ಎಕರೆ ಪ್ರದೇಶವನ್ನು ಮಂಜೂರು ಮಾಡಿದೆ. ಇದರೊಂದಿಗೆ ಅಗತ್ಯವಿರುವ ಎಲ್ಲಾ ಮೂಲಸೌಕರ್ಯಗಳನ್ನು ಒದಗಿಸಿಕೊಟ್ಟಿದೆ ಎಂದು ಸಿಎಂ ಹೇಳಿದ್ದಾರೆ.
ರೈತರಿಗೆ ಸುಲಭವಾಗಿ ಗೊಬ್ಬರ ಸಿಗುವಂತೆ ಕೇಂದ್ರ ಸರ್ಕಾರ ಈಗಾಗಲೇ ಹಲವು ಉಪಕ್ರಮಗಳನ್ನು ಕೈಗೊಂಡಿದ್ದು ಹೊಸದಾಗಿ ಸ್ಥಾಪನೆ ಆಗಿರುವ ಘಟಕವು ಕಾಲಮಿತಿಯೊಳಗೆ ಪೂರ್ಣವಾಗಬೇಕು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.