ನವದೆಹಲಿ: ಮಾಜಿ ಉಪರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಭಾರತದ ವಿರುದ್ಧ ಗೂಢಚರ್ಯೆ ನಡೆಸಿದ್ದ ಪಾಕಿಸ್ಥಾನಿ ಪತ್ರಕರ್ತನೊಂದಿಗೆ ನಿಕಟ ಸಂಬಂಧ ಹೊಂದಿದ್ದರು ಎಂಬ ವರದಿಗಳ ಹಿನ್ನೆಲೆಯಲ್ಲಿ ಬಿಜೆಪಿ ಇಂದು ಕಾಂಗ್ರೆಸ್ ವಿರುದ್ಧ ತೀಕ್ಷ್ಣ ವಾಗ್ದಾಳಿಯನ್ನು ನಡೆಸಿದೆ.
ಅಲ್ಲದೇ ಅನ್ಸಾರಿ ಮತ್ತು ಆ ಪತ್ರಕರ್ತ ವೇದಿಕೆ ಹಂಚಿಕೊಂಡ ಫೋಟೋವನ್ನು ಬಹಿರಂಗಗೊಳಿಸಿದೆ.
ಪಾಕಿಸ್ಥಾನಿ ಪತ್ರಕರ್ತೆ ನುಸ್ರತ್ ಮಿರ್ಜಾ ಯುಪಿಎ ಆಡಳಿತದಲ್ಲಿ ಐದು ಬಾರಿ ಭಾರತಕ್ಕೆ ಭೇಟಿ ನೀಡಿದ್ದ ಮತ್ತು ಇಲ್ಲಿ ಸಂಗ್ರಹಿಸಿದ ಸೂಕ್ಷ್ಮ ಮಾಹಿತಿಯನ್ನು ತನ್ನ ದೇಶದ ಬೇಹುಗಾರಿಕಾ ಸಂಸ್ಥೆ ಐಎಸ್ಐಗೆ ರವಾನಿಸಿದ್ದ ಎಂದು ಹೇಳಲಾಗಿದೆ.
ಹಮೀದ್ ಅನ್ಸಾರಿ ಅವರ ಆಹ್ವಾನದ ಮೇರೆಗೆ ಭಾರತಕ್ಕೆ ಭೇಟಿ ನೀಡಿದ್ದೆ ಮತ್ತು ಅವರನ್ನು ಭೇಟಿಯಾಗಿದ್ದೆ ಎಂದು ನುಸ್ರತ್ ಮಿರ್ಜಾ ಹೇಳಿಕೊಂಡಿದ್ದಾನೆ.
ಹಮೀದ್ ಅನ್ಸಾರಿ ಅವರು ತನ್ನೊಂದಿಗೆ ಹಲವು ಸೂಕ್ಷ್ಮ ಮತ್ತು ಅತ್ಯಂತ ರಹಸ್ಯ ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬ ನುಸ್ರತ್ ಮಿರ್ಜಾ ಹೇಳಿಕೆಗಳನ್ನು ಬಿಜೆಪಿ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.
ಶುಕ್ರವಾರ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಕ್ಷದ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ, 2009ರಲ್ಲಿ ನಡೆದ ಭಯೋತ್ಪಾದನೆ ಕುರಿತ ಸಮಾವೇಶದಲ್ಲಿ ಹಮೀದ್ ಅನ್ಸಾರಿ ಅವರು ನುಸ್ರತ್ ಮಿರ್ಜಾ ಅವರೊಂದಿಗೆ ವೇದಿಕೆ ಹಂಚಿಕೊಂಡ ಚಿತ್ರವನ್ನು ತೋರಿಸಿದ್ದಾರೆ.
ಸಾಂವಿಧಾನಿಕ ಹುದ್ದೆಗಳನ್ನು ಹೊಂದಿರುವ ಜನರು ಜವಾಬ್ದಾರಿಯುತವಾಗಿ ವರ್ತಿಸಬೇಕು ಮತ್ತು ನುಸ್ರತ್ ಮಿರ್ಜಾ ಅವರೊಂದಿಗೆ ವೇದಿಕೆಯನ್ನು ಹಂಚಿಕೊಳ್ಳಬಾರದಿತ್ತು ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.