ಮುಂಬಯಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಮಹಾರಾಷ್ಟ್ರ ನವನಿರ್ಮಾಣ ಸೇನೆ (ಎಂಎನ್ಎಸ್) ಮುಖ್ಯಸ್ಥ ರಾಜ್ ಠಾಕ್ರೆ ಅವರನ್ನು ಇಂದು ಭೇಟಿ ಮಾಡಿದ್ದಾರೆ.
ದೇವೇಂದ್ರ ಫಡ್ನವೀಸ್ ಅವರು ರಾಜ್ ಠಾಕ್ರೆ ಅವರ ಮನೆಗೆ ತೆರಳಿ ಅವರನ್ನು ಭೇಟಿ ಮಾಡಿದರು. 1.30ಕ್ಕೆ ಉಭಯ ನಾಯಕರ ನಡುವೆ ಮಾತುಕತೆ ನಡೆಯಿತು. ಮಾತುಕತೆಯಲ್ಲಿ ಶಿಂಧೆ ಸಂಪುಟದಲ್ಲಿ ಎಂಎನ್ ಎಸ್ ಗೆ ಸ್ಥಾನ ನೀಡುವ ಕುರಿತು ಚರ್ಚೆ ನಡೆದಿದೆ.
ಮಾಹಿತಿ ಪ್ರಕಾರ, ಶಿಂಧೆ ಸಂಪುಟದಲ್ಲಿ ಎಂಎನ್ ಎಸ್ ಗೆ ಸ್ಥಾನ ನೀಡಬಹುದು. ಎಂಎನ್ಎಸ್ನ ಯಾವುದೇ ಶಾಸಕರನ್ನು ಮಂತ್ರಿ ಮಾಡಬಹುದು. ಇದೇ ವೇಳೆ ಮಹಾರಾಷ್ಟ್ರ ರಾಜಕೀಯದಲ್ಲಿ ಹೊಸ ಸಮೀಕರಣವಾಗಲಿದೆ ಎಂದು ಹೇಳಲಾಗಿದೆ.
ರಾಜ್ ಠಾಕ್ರೆ ಪುತ್ರ ಅಮಿತ್ ಠಾಕ್ರೆ ಅವರನ್ನು ಸಚಿವರನ್ನಾಗಿ ಮಾಡಬಹುದು ಎಂಬ ಚರ್ಚೆ ರಾಜಕೀಯ ಕಾರಿಡಾರ್ನಲ್ಲಿ ನಡೆಯುತ್ತಿದೆ. ಒಂದು ವೇಳೆ ಅಮಿತ್ ಠಾಕ್ರೆ ಅವರು ಸಚಿವ ಸ್ಥಾನವನ್ನು ಒಪ್ಪಿಕೊಂಡರೆ, ಅವರು ವಿಧಾನಸಭೆ ಅಥವಾ ವಿಧಾನ ಪರಿಷತ್ತಿನ ಸದಸ್ಯರಾಗಬೇಕಾಗುತ್ತದೆ.
मनसे नेते राज ठाकरे जी यांची आज मुंबई येथे त्यांच्या निवासस्थानी सदिच्छा भेट घेऊन प्रकृतीची विचारपूस केली आणि त्यांना लवकर बरे होण्यासाठी शुभेच्छा दिल्या.@RajThackeray #Maharashtra #Mumbai pic.twitter.com/RYkM8suSJm
— Devendra Fadnavis (@Dev_Fadnavis) July 15, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.