News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಹ್ಮದ್‌ ಪಟೇಲ್‌ ಆದೇಶದಂತೆ ಗುಜರಾತ್‌ ಸರ್ಕಾರ ಉರುಳಿಸಲು ತೀಸ್ತಾ ಪಿತೂರಿ: ಎಸ್‌ಐಟಿ

ಅಹ್ಮದಾಬಾದ್: ಸಾಮಾಜಿಕ ಕಾರ್ಯಕರ್ತೆ ತೀಸ್ತಾ ಸೆಟಲ್ವಾಡ್ , ಕಾಂಗ್ರೆಸ್ ನಾಯಕ ಅಹಮದ್ ಪಟೇಲ್ 2002ರ ಗುಜರಾತ್ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಜರಾತಿನ ನರೇಂದ್ರ ಮೋದಿ ಸರಕಾರವನ್ನು ಉರುಳಿಸಲು ಕುತಂತ್ರ ನಡೆಸಿದ್ದರು ಎಂದು ಗುಜರಾತ್ ಸರಕಾರ ನೇಮಕ ಮಾಡಿರುವ ಎಸ್ಐಟಿ ಹೇಳಿದೆ.

ಗೋಧ್ರಾ ದಂಗೆಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಸುಳ್ಳು ಸಾಕ್ಷಾಧಾರಗಳನ್ನು ಸೃಷ್ಟಿಸಿದ ಆರೋಪಗಳಿಗೆ ಸಂಬಂಧಿಸಿದಂತೆ ತೀಸ್ತಾ ಸೆಟಲ್ವಾಡ್, ಮಾಜಿ ಡಿಜಿಪಿ ಆರ್ ಬಿ ಶ್ರೀಕುಮಾರ್ ಮತ್ತು ಮಾಜಿ ಡಿಐಜಿ ಸಂಜೀವ್ ಭಟ್ ಅವರನ್ನು ಎಸ್ಐಟಿ ವಿಚಾರಣೆ ನಡೆಸುತ್ತಿದೆ.

ಅಹಮದ್ ಪಟೇಲ್ ಅವರ ಆದೇಶದ ಮೇರೆಗೆ ಸೆಟಲ್ವಾಡ್ ಮತ್ತು ಇತರರು ಆಗಿನ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಗುಜರಾತ್ ಸರಕಾರವನ್ನು ಅಸ್ಥಿರಗೊಳಿಸಲು ಪಿತೂರಿ ನಡೆಸಿದ್ದರು. ಇದಕ್ಕಾಗಿ ಸುಳ್ಳು ಸಾಕ್ಷ್ಯಾಧಾರಗಳನ್ನು ಸಂಗ್ರಹಿಸಿದ್ದರು ಎಂದು ಹೇಳಿದೆ.

ಸೆಟಲ್ವಾಡ್ ಅವರು ರಾಜಕೀಯ ಉದ್ದೇಶಕ್ಕಾಗಿ ಗುಜರಾತ್ ನ ಚುನಾಯಿತ ಸರಕಾರವನ್ನು ಅಸ್ಥಿರಗೊಳಿಸಲು ಪಿತೂರಿ ರೂಪಿಸಿದ್ದರು‌ ಇದಕ್ಕಾಗಿ ರಾಜಕೀಯ ಪಕ್ಷದಿಂದ ಹಣಕಾಸು ಸೇರಿದಂತೆ ಹಲವಾರು ಪ್ರಯೋಜನಗಳನ್ನು ಅವರು ಪಡೆದುಕೊಂಡಿದ್ದಾರೆ ಎಂದು ಹೇಳಿದೆ.

ತೀಸ್ತಾ ಸೆಟಲ್ವಾಡ್ ಅವರ ಜಾಮೀನು ಅರ್ಜಿಯನ್ನು ಗುಜರಾತ್ ಪೊಲೀಸರು ಶುಕ್ರವಾರ ವಿರೋಧಿಸಿದ್ದಾರೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಡಿ ಡಿ ಠಕ್ಕರ್ ಅವರು ಎಸ್‌ಐಟಿಯ ಉತ್ತರವನ್ನು ದಾಖಲಿಸಿಕೊಂಡು ಸೋಮವಾರಕ್ಕೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top