ನವದೆಹಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧನ್ಖರ್ ಅವರು ಎನ್ಡಿಎ ಮೈತ್ರಿಕೂಟದ ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದಾರೆ. ಪ್ರಸ್ತುತ ಪಶ್ಚಿಮಬಂಗಾಳದ ರಾಜ್ಯಪಾಲರಾಗಿ ಕಾರ್ಯನಿರ್ವಹಿಸುತ್ತಿರುವ ಅವರು ಅನುಭವಿ ರಾಜಕಾರಣಿ.
ಜಗದೀಶ್ ಧನ್ಖರ್ ಮಾಜಿ ಕೇಂದ್ರ ಸಚಿವ, ಸಂಸದ ಮತ್ತು ಶಾಸಕರಾಗಿ ಸೇವೆ ಸಲ್ಲಿಸಿದ ಅನುಭವವನ್ನು ಹೊಂದಿದ್ದಾರೆ. ಚಿಕ್ಕ ವಯಸ್ಸಿನಲ್ಲೇ ರಾಜಸ್ಥಾನ ಬಾರ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದರು. ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ ಗಳಲ್ಲಿ 40 ವರ್ಷಗಳ ಅನುಭವ ಹೊಂದಿದ್ದಾರೆ.
ರಾಜಸ್ಥಾನದ ಜುಂಜುನುನ ಕಿಠಾನ್ ಗ್ರಾಮದಲ್ಲಿ 1951ರ ಮೇ 18ರಂದು ರೈತ ಕುಟುಂಬದಲ್ಲಿ ಜನಿಸಿದ ಇವರು, ನಿತ್ಯ ಐದು ಕಿಲೋಮೀಟರ್ ನಡೆದುಕೊಂಡು ಶಾಲೆಗೆ ಹೋಗಿ ಶಿಕ್ಷಣವನ್ನು ಪಡೆದುಕೊಂಡಿದ್ದಾರೆ. ಸೈನಿಕ ಶಾಲೆಯಲ್ಲಿ ಸ್ಕಾಲರ್ಶಿಪ್ ಪಡೆದುಕೊಂಡು ವ್ಯಾಸಂಗ ಮಾಡಿದ್ದಾರೆ.
1979ರಲ್ಲಿ ರಾಜಸ್ಥಾನ ವಿಶ್ವವಿದ್ಯಾಲಯದಿಂದ ಎಲ್ಎಲ್ಬಿ ಪದವಿ ಪಡೆದುಕೊಂಡಿದ್ದಾರೆ. ಜೈಪುರ ಮಹಾರಾಜ ಕಾಲೇಜ್ನಲ್ಲಿ ಬಿಎಸ್ಸಿ ಮಾಡಿದ್ದಾರೆ.
ಇವರು ಉಪ ರಾಷ್ಟ್ರಪತಿ ಸ್ಥಾನಕ್ಕೆ ಅರ್ಹ ವ್ಯಕ್ತಿಯಾಗಿದ್ದು, ಈಗಾಗಲೇ ಹಲವು ಪಕ್ಷಗಳು ಅವರಿಗೆ ಬೆಂಬಲ ನೀಡಲಿದೆ. ಧನ್ಕರ್ ಅವರನ್ನು ಬೆಂಬಲಿಸುವುದಾಗಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಘೋಷಿಸಿದ್ದಾರೆ.
ಮೋದಿ ಧನಖರ್ ಅವರ ಗುಣಗಾನ ಮಾಡಿದ್ದು, “ರೈತ ಪುತ್ರ ಜಗದೀಪ್ ಧನ್ಖರ್ ಅವರು ತಮ್ಮ ನಮ್ರತೆಗೆ ಹೆಸರುವಾಸಿಯಾಗಿದ್ದಾರೆ. ಅವರು ಕಾನೂನು, ಶಾಸಕಾಂಗ ಮತ್ತು ಆಡಳಿತಾತ್ಮಕ ವೃತ್ತಿಯಲ್ಲಿ ಪರಿಣತರು. ಅವರು ಯಾವಾಗಲೂ ರೈತರು, ಯುವಕರು, ಮಹಿಳೆಯರು ಮತ್ತು ದುರ್ಬಲರ ಏಳಿಗೆಗಾಗಿ ಶ್ರಮಿಸಿದ್ದಾರೆ. ಅವರೇ ನಮ್ಮ ಉಪ ರಾಷ್ಟ್ರಪತಿ ಅಭ್ಯರ್ಥಿಯಾಗುವುದು ಖುಷಿ ತಂದಿದೆ” ಎಂದಿದ್ದಾರೆ.
“ಜಗದೀಪ್ ಧನ್ಖರ್ ಅವರು ನಮ್ಮ ಸಂವಿಧಾನದ ಬಗ್ಗೆ ಉತ್ತಮ ಜ್ಞಾನವನ್ನು ಹೊಂದಿದ್ದಾರೆ. ಅವರು ಶಾಸಕಾಂಗ ವ್ಯವಹಾರಗಳ ಬಗ್ಗೆಯೂ ಚೆನ್ನಾಗಿ ತಿಳಿದಿದ್ದಾರೆ. ಅವರು ರಾಜ್ಯಸಭೆಯಲ್ಲಿ ಮಹೋನ್ನತ ಅಧ್ಯಕ್ಷರಾಗಲಿದ್ದಾರೆ ಮತ್ತು ರಾಷ್ಟ್ರೀಯ ಪ್ರಗತಿಯನ್ನು ಹೆಚ್ಚಿಸುವ ಉದ್ದೇಶದಿಂದ ಸದನದ ಕಲಾಪಗಳಿಗೆ ಮಾರ್ಗದರ್ಶನ ನೀಡುತ್ತಾರೆ ಎಂದು ನನಗೆ ಖಾತ್ರಿಯಿದೆ” ಎಂದಿದ್ದಾರೆ.
Shri Jagdeep Dhankhar Ji has excellent knowledge of our Constitution. He is also well-versed with legislative affairs. I am sure that he will be an outstanding Chair in the Rajya Sabha & guide the proceedings of the House with the aim of furthering national progress. @jdhankhar1 pic.twitter.com/Ibfsp1fgDt
— Narendra Modi (@narendramodi) July 16, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.