ನವದೆಹಲಿ: ದೇಶದ ನಾಗರಿಕರಲ್ಲಿ ದೇಶಭಕ್ತಿಯ ಭಾವವನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ʼಹರ್ ಘರ್ ತಿರಂಗಾʼ ಅಭಿಯಾನವನ್ನು ಆಯೋಜನೆ ಮಾಡಲು ಸಿದ್ಧತೆ ಆರಂಭಿಸಿದೆ.
ಹರ್ ಘರ್ ತಿರಂಗಾ ಕಾರ್ಯಕ್ರಮದ ಕುರಿತು ಕೇಂದ್ರಾಡಳಿತ ಪ್ರದೇಶಗಳ ಎಲ್ಲಾ ಮುಖ್ಯಮಂತ್ರಿಗಳು, ಲೆಫ್ಟಿನೆಂಟ್ ಗವರ್ನರ್ಗಳು ಮತ್ತು ಆಡಳಿತಾಧಿಕಾರಿಗಳೊಂದಿಗೆ ಗೃಹ ಸಚಿವ ಅಮಿತ್ ಶಾ ಅವರು ನಿನ್ನೆ ಸಭೆ ನಡೆಸಿದ್ದಾರೆ.
ದೇಶವಾಸಿಗಳಲ್ಲಿ ದೇಶಭಕ್ತಿಯ ಭಾವನೆಯನ್ನು ಮತ್ತಷ್ಟು ಬಲಪಡಿಸಲು, ಪ್ರಧಾನಿ ನರೇಂದ್ರ ಮೋದಿ ಅವರು ‘ಹರ್ ಘರ್ ತಿರಂಗಾʼ ವಿಶಿಷ್ಟ ಅಭಿಯಾನವನ್ನು ಘೋಷಿಸಿದ್ದಾರೆ. ಈ ಅಭಿಯಾನದಲ್ಲಿ ದೇಶಾದ್ಯಂತ ನೂರು ಕೋಟಿಗೂ ಹೆಚ್ಚು ಜನರನ್ನು ಸಂಪರ್ಕಿಸಿ, ಆಗಸ್ಟ್ 13 ರಿಂದ 15 ರವರೆಗೆ ಅವರ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಹಾರಿಸುವಂತೆ ಕೋರಲಾಗುವುದು ಎಂದು ಶಾ ಹೇಳಿದ್ದಾರೆ.
ಈ ಅಭಿಯಾನವು ಮುಂದಿನ ಹಲವು ವರ್ಷಗಳ ಕಾಲ ದೇಶದ ಅಭಿವೃದ್ಧಿ ಮತ್ತು ಭದ್ರತೆಯೊಂದಿಗೆ ಯುವ ಪೀಳಿಗೆಯನ್ನು ಸಂಪರ್ಕಿಸುತ್ತದೆ ಎಂದು ಗೃಹ ಸಚಿವರು ಹೇಳಿದರು. ಈ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಬೇಕು ಎಂದು ಮನವಿ ಮಾಡಿದರು.
ರಾಷ್ಟ್ರೀಯ ಒಮ್ಮತವನ್ನು ನಿರ್ಮಿಸುವ ಅಗತ್ಯವಿರುವ ವಿಷಯಗಳಲ್ಲಿ ದೇಶವು 100% ಫಲಿತಾಂಶಗಳನ್ನು ಸಾಧಿಸುವತ್ತ ಸಾಗುತ್ತಿದೆ ಎಂದು ಅಮಿತ್ ಶಾ ಹೇಳಿದ್ದಾರೆ.
Home Minister @AmitShah holds meeting with all CMs, LGs and Administrators of UTs on #HarGharTiranga Program.
To further strengthen the feeling of patriotism among the countrymen, PM @narendramodi has announced an unique campaign in the form of 'Har Ghar Tiranga' program. pic.twitter.com/exhI8JHm2u
— DD News (@DDNewslive) July 17, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.