News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯದ 1038 ಕೆರೆಗಳ ಅಭಿವೃದ್ಧಿಗೆ ವಿಶೇಷ ಯೋಜನೆ

ಬೆಂಗಳೂರು: ರಾಜ್ಯದ 1038 ಕೆರೆಗಳ ಅಭಿವೃದ್ಧಿಗಾಗಿ ಲೋಕೋಪಯೋಗಿ ಇಲಾಖೆಯು ವಿಶೇಷ ಯೋಜನೆಯನ್ನು ಅನುಷ್ಠಾನಗೊಳಿಸಲು ಮುಂದಾಗಿದೆ. ಕೆರೆಗಳ ಹೂಳೆತ್ತಿದ ಮಣ್ಣನ್ನು ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಬಳಸಿಕೊಳ್ಳುವ ಈ ಯೋಜನೆಗೆ ಕೇಂದ್ರ ಭೂಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಬೆಂಬಲವೂ ಇದೆ.

ಜಲ ಮೂಲಗಳಲ್ಲಿ ತುಂಬಿರುವ ಹೂಳು ಎತ್ತುವಲ್ಲಿ ಇರುವ ಸಮಸ್ಯೆಗಳಿಗೆ ಮತ್ತು ಹೆದ್ದಾರಿ ನಿರ್ಮಾಣಕ್ಕೆ ಅಗತ್ಯವಿರುವ ಮಣ್ಣು ತರುವ ಸಮಸ್ಯೆಗೆ ಈ ಯೋಜನೆಯಿಂದ ಪರಿಹಾರ ಸಿಗಲಿದೆ. ಅಂದರೆ ಒಂದು ಯೋಜನೆಯಿಂದ ಎರಡು ಸಮಸ್ಯೆಗಳು ಬಗೆಹರಿಯಲಿದೆ. ಹೂಳು ಎತ್ತಿದ ಮಣ್ಣನ್ನು ಏನು ಮಾಡಬೇಕು ಎಂಬ ಬಗ್ಗೆ ಸರ್ಕಾರ ಚಿಂತೆ ಮಾಡುವ ಅಗತ್ಯವಿರುವುದಿಲ್ಲ. ಅಂತೆಯೇ ಹೆದ್ದಾರಿ ನಿರ್ಮಾಣಕ್ಕೆ ಮಣ್ಣು ಎಲ್ಲಿಂದ ತರುವುದು ಎಂಬ ಚಿಂತೆಯೂ ಇರುವುದಿಲ್ಲ.

ಯೋಜನೆಯಡಿ ರಾಜ್ಯದಲ್ಲಿರುವ ಹೆದ್ದಾರಿಗಳನ್ನು ಅಭಿವೃದ್ಧಿಪಡಿಸುವ ಸಂದರ್ಭದಲ್ಲಿ ಅಗತ್ಯವಿರುವ ಮಣ್ಣಿಗಾಗಿ ಸ್ಥಳೀಯವಾಗಿರುವ ಕೆರೆಗಳ ಹೂಳನ್ನು ಬಳಸಿಕೊಳ್ಳಲು ತೀರ್ಮಾನಿಸಲಾಗಿದೆ. ಇದರಿಂದ ರಾಜ್ಯದ 1038 ಕೆರೆಗಳ ಹೂಳೆತ್ತಿ ಅಭಿವೃದ್ಧಿಪಡಿಸಲು ಮತ್ತು ಅಕ್ಕಪಕ್ಕದ ರಾಷ್ಟ್ರೀಯ ಹೆದ್ದಾರಿ ಯೋಜನೆಗೆ ಆ ಹೂಳನ್ನು ಬಳಸಿಕೊಳ್ಳಲು ಸಾಧ್ಯವಾಗಲಿದೆ. ಈ ಬಗ್ಗೆ ಈಗಾಗಲೇ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ ಸಿ ಪಾಟೀಲ್ ತಿಳಿಸಿದ್ದಾರೆ.

ದೇಶದಲ್ಲಿಯೇ ಮೊದಲ ಬಾರಿಗೆ ಜಾರಿಯಾಗುತ್ತಿರುವ ಈ ಯೋಜನೆಯ ಬಗ್ಗೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ವಿಶೇಷ ಆಸಕ್ತಿ ತೋರಿಸಿದ್ದಾರೆ ಎಂದು ಅವರು ಹೇಳಿದ್ದಾರೆ.

ಹೆದ್ದಾರಿ ಅಕ್ಕ ಪಕ್ಕದ ಕೆರೆ ಮತ್ತಿತರ ಜಲಮೂಲಗಳಲ್ಲಿ ಹೂಳು ತುಂಬಿ ನೀರಿನ ಲಭ್ಯತೆಗೆ ಸಮಸ್ಯೆಯಾಗುತ್ತಿದೆ. ಆದರೆ ಹೆದ್ದಾರಿ ಅಭಿವೃದ್ಧಿ ಕಾರ್ಯಕ್ಕೆ ಅವಶ್ಯವಿರುವ ಮಣ್ಣನ್ನು ಇಂತಹ ಕೆರೆಗಳಿಂದಲೇ ತೆಗೆಸಿ ರಸ್ತೆಗೆ ಬಳಸಿದರೆ ಕೆರೆಯೂ ಅಭಿವೃದ್ಧಿ ಕಾಣುತ್ತದೆ, ಮತ್ತೊಂದು ಕಡೆ ಹೆದ್ದಾರಿ ನಿರ್ಮಾಣಕ್ಕೂ ಮಣ್ಣು ಸುಲಭವಾಗಿ ಲಭ್ಯವಾಗುತ್ತದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top