ನವದೆಹಲಿ: ಭಾರತವು ತನ್ನ 75 ನೇ ಸ್ವಾತಂತ್ರ್ಯದ ವರ್ಷವನ್ನು ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ‘ಆಜಾದಿ ಕಾ ಅಮೃತ್ ಮಹೋತ್ಸವ’ ಥೀಮ್ ಅಡಿಯಲ್ಲಿ ದೇಶಾದ್ಯಂತ ವಿವಿಧ ರೀತಿಯ ಆಚರಣೆಗಳಿಗೆ ಕರೆ ನೀಡಿದೆ.
ಇದಕ್ಕೆ ಅನುಸಾರವಾಗಿ ಭಾರತೀಯ ರೈಲ್ವೇಯು ವಿವಿಧ ಚಟುವಟಿಕೆಗಳೊಂದಿಗೆ “ಆಜಾದಿ ಕಿ ರೈಲ್ ಗಾಡಿ ಔರ್ ಸ್ಟೇಷನ್ಸ್” ಕಾರ್ಯಕ್ರಮದ ಸಾಂಪ್ರದಾಯಿಕ ಸಾಪ್ತಾಹಿಕವನ್ನು ಪ್ರಾರಂಭಿಸುವುದಾಗಿ ಘೋಷಿಸಿದೆ.
ರೈಲ್ವೆ ಸೋಮವಾರ ಮುಂಬೈನ ಐಕಾನಿಕ್ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್ ಅನ್ನು ತ್ರಿವರ್ಣ ದೀಪಗಳಿಂದ ಬೆಳಗಿಸಿದೆ. ಇದರ ಚಿತ್ರಗಳನ್ನು ಸೆಂಟ್ರಲ್ ರೈಲ್ವೆ ತನ್ನ ಟ್ವಿಟರ್ ಹ್ಯಾಂಡಲ್ನಲ್ಲಿ ಹಂಚಿಕೊಂಡಿದೆ.
ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಸ್, ಮುಂಬೈ ಇತಿಹಾಸದ ಪ್ರಮುಖ ಭಾಗವಾಗಿದೆ. ಭಾರತೀಯ ಉಪಖಂಡದ ಮೊದಲ ರೈಲು ಇಲ್ಲಿಂದ ಓಡಿತು ಮತ್ತು ಮುಂಬೈ ಸ್ವಾತಂತ್ರ್ಯ ಹೋರಾಟದ ಚಳುವಳಿಯ ಕೇಂದ್ರಗಳಲ್ಲಿ ಇದು ಒಂದಾಗಿದೆ.
#AzadiKaAmritMahotsav #AzadiKiRail #Chhatrapati Shivaji Maharaj Terminus, Mumbai wrapped with #Tiranga on the first day of the #Iconic Week Celebrations as "Azadi Ki Rail Gadi Aur Stations" commenced today. pic.twitter.com/bjkckfthAs
— Central Railway (@Central_Railway) July 18, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.