News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ

ನವದೆಹಲಿ: 16ನೇ ರಾಷ್ಟ್ರಪತಿ ಚುನಾವಣೆಯ ಮತ ಎಣಿಕೆ ಕಾರ್ಯ ಇಂದು ಬೆಳಿಗ್ಗೆ 11 ಗಂಟೆಗೆ ಸಂಸತ್ತಿನ ಆವರಣದಲ್ಲಿ ನಡೆಯಲಿದೆ. ಚುನಾವಣೆಯು ಜುಲೈ 18ರಂದು ಸಂಸತ್ ಆವರಣ ಮತ್ತು ದೇಶಾದ್ಯಂತದ ವಿಧಾನಸಭೆಗಳಲ್ಲಿ ನಡೆದಿತ್ತು.

ರಾಷ್ಟ್ರಪತಿ ಚುನಾವಣೆಯಲ್ಲಿ ಶೇಕಡ 99 ರಷ್ಟು ಮತದಾನವಾಗಿದೆ ಎಂದು ವರದಿಗಳು ತಿಳಿಸಿವೆ. 11 ರಾಜ್ಯಗಳಲ್ಲಿ ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಶೇ. 100ರಷ್ಟು ಶಾಸಕರು ಮತದಾನ ಮಾಡಿದ್ದಾರೆ.

ಛತ್ತೀಸ್ಗಡ, ಗೋವಾ, ಗುಜರಾತ್, ಹಿಮಾಚಲ ಪ್ರದೇಶ, ಕೇರಳ, ಕರ್ನಾಟಕ, ಮಧ್ಯಪ್ರದೇಶ, ಮಣಿಪುರ, ಮಿಜೋರಾಂ, ಸಿಕ್ಕಿಂ ಮತ್ತು ತಮಿಳುನಾಡು ಶೇ‌100ರಷ್ಟು ಮತದಾನವನ್ನು ಕಂಡ ರಾಜ್ಯಗಳಾಗಿವೆ.

ಜಾರ್ಖಂಡ್ ಮಾಜಿ ರಾಜ್ಯಪಾಲ ದ್ರೌಪತಿ ಮುರ್ಮು ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ಎನ್​ಡಿಎ ರಾಷ್ಟ್ರಪತಿ ಅಭ್ಯರ್ಥಿಯಾದರೆ, ಯಶವಂತ್ ಸಿನ್ಹಾ ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿದ್ದಾರೆ.

ಪ್ರಾದೇಶಿಕ ಪಕ್ಷಗಳಾದ ಬಿಜು ಜನತಾದಳ, ವೈಎಸ್‌ಆರ್ ಕಾಂಗ್ರೆಸ್, ಜೆಡಿಎಸ್, ಶಿರೋಮಣಿ ಅಕಾಲಿ ದಳ, ಎಐಎಡಿಎಂಕೆ, ಜಾರ್ಖಂಡ್ ಮುಕ್ತಿ ಮೋರ್ಚಾ ಮುರ್ಮು ಅವರಿಗೆ ಬೆಂಬಲ ನೀಡಿದೆ.

ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರ ಅವಧಿ ಜುಲೈ 24ರಂದು ಅಂತ್ಯವಾಗಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top