News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದೆಹಲಿಯಲ್ಲಿ ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಭೂತಾನ್‌ ವಿತ್ತ ಸಚಿವ

ನವದೆಹಲಿ: ಭೂತಾನ್‌ನ ಆರ್ಥಿಕ ವ್ಯವಹಾರಗಳ ಸಚಿವ ಲೋಕನಾಥ್ ಶರ್ಮಾ ಅವರು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ನರೇಂದ್ರ ಸಿಂಗ್ ತೋಮರ್ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿದರು.

ಭೇಟಿಯ ಸಂದರ್ಭದಲ್ಲಿ ಮಾತನಾಡಿದ ತೋಮರ್ ಅವರು, ಕೃಷಿ ಕ್ಷೇತ್ರದಲ್ಲಿ ಭೂತಾನ್‌ಗೆ ಭಾರತವು ಸಂಪೂರ್ಣ ಸಹಕಾರವನ್ನು ವಿಸ್ತರಿಸಿದೆ ಮತ್ತು ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವುದನ್ನು ಮುಂದುವರಿಸುತ್ತದೆ ಎಂಬ ಭರವಸೆಯನ್ನು ನೀಡಿದ್ದಾರೆ.

ಭೂತಾನ್ ನಿಯೋಗವನ್ನು ಸ್ವಾಗತಿಸಿದ ಸಚಿವರು, ಉಭಯ ದೇಶಗಳ ನಡುವಿನ ಸುದೀರ್ಘ ಸೌಹಾರ್ದ ಸಂಬಂಧದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಈ ಸೌಹಾರ್ದತೆಯನ್ನು ಹೆಚ್ಚಿಸಲು ಭಾರತ ಉದಾರವಾಗಿ ಸಹಕಾರ ನೀಡುತ್ತಿದೆ . ಭೂತಾನ್‌ನಿಂದ ವಿವಿಧ ಕೃಷಿ ಉತ್ಪನ್ನಗಳಿಗೆ ಭಾರತೀಯ ಮಾರುಕಟ್ಟೆಗಳನ್ನು ತೆರೆಯಲು ಸರ್ಕಾರವು ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಭೂತಾನ್‌ನ ಕೋರಿಕೆಯ ಮೇರೆಗೆ ಭಾರತಕ್ಕೆ ಶುಂಠಿ ರಫ್ತು ಮಾಡಲು ಮತ್ತು ಆಲೂಗಡ್ಡೆ ರಫ್ತು ಮಾಡಲು ಆ ದೇಶಕ್ಕೆ ಇನ್ನೂ ಒಂದು ವರ್ಷ ಅವಕಾಶ ನೀಡಲಾಗಿದೆ ಎಂದು ತೋಮರ್ ಮಾಹಿತಿ ನೀಡಿದರು.

ಎರಡೂ ದೇಶಗಳು ಕೃಷಿ ವಲಯದಲ್ಲಿ ಒಟ್ಟಾಗಿ ಕೆಲಸ ಮಾಡುವುದನ್ನು ಮುಂದುವರಿಸುತ್ತವೆ ಮತ್ತು ಆಂತರಿಕ ಮತ್ತು ಬಾಹ್ಯ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಭೂತಾನ್‌ನ ವಿನಂತಿಯಂತೆ ಅಗತ್ಯವಿರುವ ಸಕಾರಾತ್ಮಕ ವಿಧಾನವನ್ನು ಅನುಸರಿಸುತ್ತೇವೆ ಎಂದು ಅವರು ಭರವಸೆ ನೀಡಿದರು.

ಭೂತಾನ್‌ಗೆ ಸಕ್ಕರೆ ಪೂರೈಕೆ ಸೇರಿದಂತೆ ವಿವಿಧ ವಿಷಯಗಳಲ್ಲಿ ಸಹಕಾರಕ್ಕಾಗಿ ಭೂತಾನ್ ಸಚಿವರು ಭಾರತಕ್ಕೆ ಧನ್ಯವಾದ ಅರ್ಪಿಸಿದರು. ಭೂತಾನ್‌ಗೆ ಕೃಷಿ ವಿಷಯಗಳು ಮುಖ್ಯವಾಗಿದ್ದು, ಉಭಯ ದೇಶಗಳ ನಡುವಿನ ಸೌಹಾರ್ದವನ್ನು ಹೆಚ್ಚಿಸಲು ಭೇಟಿ ನೀಡಿರುವುದಾಗಿ ತಿಳಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top