News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಾಜ್ಯಸಭೆಯಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ವಿರೇಂದ್ರ ಹೆಗ್ಗಡೆ

ನವದೆಹಲಿ: ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಇಂದು ರಾಜ್ಯಸಭೆಯಲ್ಲಿ ಸಂಸದರಾಗಿ ಕನ್ನಡದಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

“ಭಾರತ ಸಂವಿಧಾನದಲ್ಲಿ ನಿಜವಾದ ನಂಬಿಕೆಯನ್ನು ಹೊಂದಿ, ನನ್ನ ಕರ್ತವ್ಯವನ್ನು ಶ್ರದ್ಧಾಪೂರ್ವಕವಾಗಿ ನಿರ್ವಹಿಸುವೆ” ಎಂದು ದೇವರ ಹೆಸರಿನಲ್ಲಿ ಅವರು ಪ್ರಮಾಣ ಸ್ವೀಕರಿಸಿದ್ದಾರೆ.

ತಮ್ಮ ಇಪ್ಪತ್ತನೇ ವಯಸ್ಸಿನಿಂದ ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದ ಧರ್ಮಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದು, ಐದು ದಶಕಗಳಿಗೂ ಅಧಿಕ ಕಾಲದಿಂದ ಸಮಾಜ ಸೇವೆಗೆ ತಮ್ಮನ್ನು ಸಮರ್ಪಿಸಿಕೊಂಡಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗದ ಉತ್ತೇಜನಕ್ಕಾಗಿ ಅವರು ಹಲವಾರು ಪರಿವರ್ತನೀಯ ಉಪಕ್ರಮಗಳ ನೇತೃತ್ವ ವಹಿಸಿದ್ದಾರೆ.

ಸ್ವ-ಉದ್ಯೋಗ ಅವಕಾಶಗಳ ಬಗ್ಗೆ ಅರಿವು ಮೂಡಿಸಲು ಮತ್ತು ಗ್ರಾಮೀಣ ಯುವಕರಿಗೆ ತರಬೇತಿ ನೀಡುವ ಸಲುವಾಗಿ ಅವರು ಗ್ರಾಮೀಣಾಭಿವೃದ್ಧಿ ಮತ್ತು ಸ್ವ-ಉದ್ಯೋಗ ತರಬೇತಿ ಸಂಸ್ಥೆ (RDSET) ಸ್ಥಾಪಿಸಿದ್ದಾರೆ. ಕೇಂದ್ರ ಸರಕಾರವು ಈ ಯಶಸ್ವಿ ಮಾದರಿಯನ್ನು ಪುನರಾವರ್ತಿಸಿದೆ ಮತ್ತು ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (RDSET) ಅನ್ನು ದೇಶಾದ್ಯಂತ ಸ್ಥಾಪನೆ ಮಾಡಿದೆ.

ಅವರು ಕರ್ನಾಟಕದಲ್ಲಿ ಗ್ರಾಮಗಳ ಸಮಗ್ರ ಅಭಿವೃದ್ಧಿ ಮತ್ತು ಸ್ವಉದ್ಯೋಗಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯನ್ನು ಪರಿಕಲ್ಪನೆ ಮಾಡಿದರು. ಪ್ರಸ್ತುತ ಈ ಯೋಜನೆ 6 ಲಕ್ಷಕ್ಕೂ ಅಧಿಕ ಸ್ವಸಹಾಯ ಗುಂಪುಗಳನ್ನು ಮತ್ತು 49 ಲಕ್ಷಕ್ಕೂ ಅಧಿಕ ಸದಸ್ಯರನ್ನು ಒಳಗೊಂಡಿದೆ.

25ಕ್ಕೂ ಅಧಿಕ ಶಾಲೆ ಮತ್ತು ಕಾಲೇಜುಗಳ ಮೂಲಕ ಗುಣಮಟ್ಟದ ಮತ್ತು ಕೈಗೆಟುಕುವ ಶಿಕ್ಷಣವನ್ನು ನೀಡುತ್ತಿರುವ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಎಜುಕೇಶನಲ್ ಟ್ರಸ್ಟ್ ‌ನ ಮುಖ್ಯಸ್ಥರಾಗಿ ಅವರು ಸೇವೆ ಸಲ್ಲಿಸುತ್ತಿದ್ದಾರೆ.

ಇಷ್ಟು ಮಾತ್ರವಲ್ಲದೆ, ಉತ್ತಮ ಗುಣಮಟ್ಟದ ಆರೋಗ್ಯ ಸೇವೆ ಒದಗಿಸಲು, ಸಮಾಜದ ಕಲ್ಯಾಣಕ್ಕಾಗಿ ಮತ್ತು ನಮ್ಮ ಸಾಂಸ್ಕೃತಿಕ ಪರಂಪರೆಯ ರಕ್ಷಣೆಗಾಗಿ ಅವರು ಹಲವಾರು ಉಪಕ್ರಮಗಳ ನೇತೃತ್ವ ವಹಿಸಿದ್ದಾರೆ. ಸೇವೆ ಮತ್ತು ಆಧ್ಯಾತ್ಮಿಕತೆಯನ್ನು ಎಷ್ಟು ಸೊಗಸಾಗಿ ವಿಲೀನಗೊಳಿಸಬಹುದು ಎಂಬುದನ್ನು ಅವರು ಜಗತ್ತಿಗೆ ತೋರಿಸಿಕೊಟ್ಟಿದ್ದಾರೆ.

2015ರಲ್ಲಿ ಇವರಿಗೆ ಪದ್ಮವಿಭೂಷಣ ಗೌರವವನ್ನು ನೀಡಲಾಗಿದೆ.

ಇದೀಗ ಅವರ ಸೇವೆಗೆ ಪುರಸ್ಕಾರ ಎಂಬಂತೆ ರಾಜ್ಯಸಭಾ ಸಂಸದ ಸ್ಥಾನ ದೊರೆತಿದ್ದು, ಅವರ ಸೇವೆಯ ವ್ಯಾಪ್ತಿ ಇನ್ನಷ್ಟು ವಿಸ್ತಾರಗೊಳ್ಳಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top