News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದಿನೇಶ್ ಗುಣವರ್ಧನ ಶ್ರೀಲಂಕಾದ ನೂತನ ಪ್ರಧಾನಿ

ಕೊಲಂಬೋ: ಶ್ರೀಲಂಕಾದ ನೂತನ ಪ್ರಧಾನಿಯಾಗಿ ಅಲ್ಲಿನ ಹಿರಿಯ ರಾಜಕಾರಣಿ ದಿನೇಶ್ ಗುಣವರ್ಧನ ಅವರು ಇಂದು ಪ್ರಮಾಣವಚನ ಸ್ವೀಕಾರ ಮಾಡಿದ್ದಾರೆ.

ಗುಣವರ್ಧನ ಅವರು ಹಿಂದಿನ ಸರ್ಕಾರಗಳಲ್ಲಿ ಸಂಪುಟ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅವರು ವಿದೇಶಾಂಗ ಸಚಿವರಾಗಿ, ಸಾರಿಗೆ ಸಚಿವರಾಗಿ ಮತ್ತು ನಗರಾಭಿವೃದ್ಧಿ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ ಮತ್ತು ಐದು ದಶಕಗಳ ಕಾಲದ ಅವರ ರಾಜಕೀಯ ಜೀವನದಲ್ಲಿ ಹಲವಾರು ಇತರ ಪಾತ್ರಗಳನ್ನು ನಿರ್ವಹಿಸಿದ್ದಾರೆ.

ಪ್ರಧಾನಿಯಾಗಿದ್ದ ರನಿಲ್ ವಿಕ್ರಮಸಿಂಘೆ ಅವರು ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಹಿನ್ನೆಲೆಯಲ್ಲಿ ಗುಣವರ್ಧನ ಪ್ರಧಾನಿಯಾಗಿದ್ದಾರೆ. ಇಂದು ನೂತನ ಸಚಿವ ಸಂಪುಟ ಪ್ರಮಾಣವಚನ ಸ್ವೀಕರಿಸಿದೆ.

ಗೋತಬಯ ರಾಜಪಕ್ಸೆ ಅವರು ದೇಶದಿಂದ ಪಲಾಯನಗೈದ ನಂತರ ಮತ್ತು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ 73 ವರ್ಷದ ವಿಕ್ರಮಸಿಂಘೆ ಅವರು ಗುರುವಾರ ದೇಶದ ಎಂಟನೇ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ದೇಶವು ಎದುರಿಸುತ್ತಿರುವ ಭೀಕರ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಕೈಜೋಡಿಸುವಂತೆ ಅವರು ಎಲ್ಲಾ ಮನವಿ ಮಾಡಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top