News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ನೌಕಾಪಡೆಯಲ್ಲಿ ಇಂದಿನಿಂದ ಅಗ್ನಿವೀರರ ಅರ್ಜಿ ಪ್ರಕ್ರಿಯೆ ಆರಂಭ

ನವದೆಹಲಿ: ಅಗ್ನಿಪಥ್​ ಯೋಜನೆಯಡಿ ಭಾರತೀಯ ನೌಕಾಪಡೆಗೆ ಅಗ್ನಿವೀರ ಹುದ್ದೆಗಳಿಗೆ ಅರ್ಜಿ  ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ಅರ್ಹ ಅಭ್ಯರ್ಥಿಗಳು joininsiannavy.gov.in ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಜುಲೈ 30 ಕೊನೆಯ ದಿನವಾಗಿರಲಿದೆ. ನೌಕಾಪಡೆ 200 ಅಗ್ನಿವೀರರನ್ನು ಭರ್ತಿ ಮಾಡಿಕೊಳ್ಳಲಿದೆ. ಅರ್ಜಿ ಸಲ್ಲಿಸಲು ಬಯಸಿದವರು ಶಿಕ್ಷಣ ಸಚಿವಾಲಯದಿಂದ ಮಾನ್ಯತೆ ಪಡೆದ ಶಾಲಾ ಕಾಲೇಜಿನಿಂದ 10ನೇ ತರಗತಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಡಿಸೆಂಬರ್ 1, 1999 ಮತ್ತು ಮೇ 31, 2005 ರ ನಡುವೆ ಜನಿಸಿದವರಾಗಿರಬೇಕು.

10 ನೇ ತರಗತಿಯಲ್ಲಿ ಪಡೆದ ಒಟ್ಟು ಶೇಕಡಾವಾರು ಆಧಾರದ ಮೇಲೆ ಅಭ್ಯರ್ಥಿಗಳ ಶಾರ್ಟ್‌ಲಿಸ್ಟ್ ಮಾಡುವ ಮೂಲಕ ಆಯ್ಕೆ ಮಾಡಲಾಗುತ್ತದೆ. ಬಳಿಕ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷೆ ನಡೆಸಲಾಗುತ್ತದೆ.

ಲಿಖಿತ ಪರೀಕ್ಷೆ ಮತ್ತು ದೈಹಿಕ ಪರೀಕ್ಷಗೆ ಆಧಾರ್ ಕಾರ್ಡ್ ದಾಖಲೆ ಕಡ್ಡಾಯವಾಗಿರಲಿದೆ. ದೈಹಿಕ ಸಾಮರ್ಥ್ಯ ಪರೀಕ್ಷೆಯಲ್ಲಿ ಉತ್ತೀರ್ಣರಾದ ಬಳಿಕ ಲಿಖಿತ ಪರೀಕ್ಷೆಯಲ್ಲಿನ ಆಧಾರದ ಮೇಲೆ ಮೆರಿಟ್ ಪಟ್ಟಿಯನ್ನು ತಯಾರಿಸಲಾಗುತ್ತದೆ. ಮೆರಿಟ್ ಪಟ್ಟಿಯನ್ನು ನವೆಂಬರ್​ನಲ್ಲಿ ಅಂತಿಮಗೊಳಿಸಲಾಗುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top