News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮುಂಗಾರು ಅಧಿವೇಶನದಿಂದ 4 ಕಾಂಗ್ರೆಸ್‌ ಸಂಸದರ ಅಮಾನತು

ನವದೆಹಲಿ:  ಸದನದೊಳಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್ ಸಂಸದರನ್ನು ಇಡೀ ಮುಂಗಾರು ಅಧಿವೇಶನಕ್ಕೆ ಲೋಕಸಭೆಯಿಂದ ಅಮಾನತುಗೊಳಿಸಲಾಗಿದೆ. ನಾಲ್ವರು ಕಾಂಗ್ರೆಸ್ ಸಂಸದರಾದ ಮಾಣಿಕ್ಕಂ ಟ್ಯಾಗೋರ್, ರಮ್ಯಾ ಹರಿದಾಸ್, ಜೋತಿಮಣಿ ಮತ್ತು ಟಿಎನ್ ಪ್ರತಾಪನ್ ಅಮಾನತುಗೊಂಡಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಅವರು ಪ್ರತಿಭಟನೆ ನಡೆಸಲು ಬಯಸಿದರೆ ಸದನದ ಹೊರಗೆ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸುವಂತೆ ಎಚ್ಚರಿಕೆ ನೀಡಿದ್ದಾರೆ. ಮಧ್ಯಾಹ್ನ 3 ಗಂಟೆಯ ನಂತರ ಚರ್ಚೆಗೆ ಸಿದ್ಧವಿದ್ದರೂ ಸದನದೊಳಗೆ ಯಾವುದೇ ಭಿತ್ತಿ ಪತ್ರದ ಪ್ರತಿಭಟನೆಯನ್ನು ಸಹಿಸುವುದಿಲ್ಲ ಎಂದು ಹೇಳಿದ್ದಾರೆ.

“ನೀವು ಫಲಕಗಳನ್ನು ತೋರಿಸಲು ಬಯಸಿದರೆ, ಅದನ್ನು ಸದನದ ಹೊರಗೆ ಮಾಡಿ. ನಾನು ಚರ್ಚೆಗೆ ಸಿದ್ಧನಿದ್ದೇನೆ, ಆದರೆ ನನ್ನ ಹೃದಯವಂತಿಕೆಯನ್ನು ದೌರ್ಬಲ್ಯ ಎಂದು ಭಾವಿಸಬೇಡಿ” ಎಂದು ಬಿರ್ಲಾ ಹೇಳಿದ್ದಾರೆ. ಬಳಿಕ ಕಲಾಪವನ್ನು ನಾಳೆಗೆ ಮುಂದೂಡಿದರು.

ಪ್ರತಿಪಕ್ಷಗಳ ಸದಸ್ಯರು ಹಣದುಬ್ಬರ ಮತ್ತು ಜಿಎಸ್‌ಟಿ ದರ ಏರಿಕೆ ವಿರೋಧಿಸಿ ಪ್ರತಿಭಟನೆ ನಡೆಸಿದರು. ಕೆಲವು ಸಂಸದರು ಫಲಕಗಳು ಮತ್ತು ಬ್ಯಾನರ್‌ಗಳನ್ನು ಹಿಡಿದುಕೊಂಡಿರುವುದು ಕಂಡುಬಂದಿತು. ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿಗೆ ಆಗಮಿಸಿ ತಮ್ಮ ಸಮಸ್ಯೆಗಳನ್ನು ಬಗೆಹರಿಸುವಂತೆ ಇವರು ಒತ್ತಾಯಿಸಿದ್ದಾರೆ.

ಇಂದು ಮಾನ್ಸನ್ ಅಧಿವೇಶನದ ಪ್ರಕ್ರಿಯೆ ಪ್ರಾರಂಭವಾಗುವ ಮೊದಲು, ದ್ರೌಪದಿ ಮುರ್ಮು ಅವರು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top