News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇಂದು ಕಾರ್ಗಿಲ್‌ ವಿಜಯ್‌ ದಿವಸ್:‌ ವೀರ ಯೋಧರಿಗೆ ನಮಿಸುತ್ತಿದೆ ರಾಷ್ಟ್ರ

ನವದೆಹಲಿ: ಇಂದು ದೇಶಾದ್ಯಂತ ಕಾರ್ಗಿಲ್ ವಿಜಯ್ ದಿವಸ್ ಆಚರಿಸಲಾಗುತ್ತಿದ್ದು, ಕಾರ್ಗಿಲ್ ಯುದ್ಧ ವೀರರನ್ನು ಸ್ಮರಿಸಲಾಗುತ್ತಿದೆ ಮತ್ತು ಹುತಾತ್ಮರಿಗೆ ಗೌರವ ಸಲ್ಲಿಸಲಾಗುತ್ತಿದೆ. ಈ ದಿನವು 1999 ರಲ್ಲಿ ನಡೆದ ಆಪರೇಷನ್ ವಿಜಯ್‌ನಲ್ಲಿ ಭಾರತೀಯ ಸಶಸ್ತ್ರ ಪಡೆಗಳ ವಿಜಯವನ್ನು ಸೂಚಿಸುತ್ತದೆ.  ಈ ಯುದ್ಧದಲ್ಲಿ ಕಾರ್ಗಿಲ್ ಸೆಕ್ಟರ್‌ನಲ್ಲಿ ಪಾಕಿಸ್ಥಾನಿ ಸೇನೆಯ ಬೆಂಬಲದೊಂದಿಗೆ ಭಾರತದೊಳಗೆ ನುಸುಳಿದ್ದ ನುಸುಳುಕೋರರನ್ನು ಬಗ್ಗುಬಡಿಯಲಾಯಿತು.

ಕಾರ್ಗಿಲ್ ಯುದ್ಧವು 60 ದಿನಗಳಿಗಿಂತ ಹೆಚ್ಚು ಕಾಲ ನಡೆದ ಹೋರಾಟವಾಗಿದ್ದು,  ಭಾರತವು ಪಾಕಿಸ್ಥಾನವನ್ನು ಸೋಲಿಸಿ ತನ್ನ ಎಲ್ಲಾ ಭೂಪ್ರದೇಶದ ಮೇಲೆ ಹಿಡಿತ ಸಾಧಿಸುವುದರೊಂದಿಗೆ ಕೊನೆಗೊಂಡಿತು. ಟೈಗರ್ ಹಿಲ್‌ನ ಗೆಲುವು 60 ದಿನಗಳ ಸುದೀರ್ಘ ಸಂಘರ್ಷದಲ್ಲಿ ನಿರ್ಣಾಯಕ ಅಂಶಗಳಲ್ಲಿ ಒಂದಾಗಿದೆ. ಭಾರತೀಯ ಸೈನಿಕರು ಕಾರ್ಗಿಲ್ ಯುದ್ಧವನ್ನು ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ, ಕಷ್ಟಕರವಾದ ಭೂಪ್ರದೇಶದಲ್ಲಿ, 18 ಸಾವಿರ ಅಡಿ ಎತ್ತರದಲ್ಲಿ ಹೋರಾಡಿ ಜಯಿಸಿದರು ಎಂಬುದೇ ರೋಚಕ.

ಕಾರ್ಗಿಲ್ ವಿಜಯ್ ದಿವಸ್ ಸಂದರ್ಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು  ದೇಶವನ್ನು ರಕ್ಷಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ವೀರ ಯೋಧರಿಗೆ ನಮಿಸಿದ್ದಾರೆ. ಮುರ್ಮು ಟ್ವೀಟ್‌ ಮಾಡಿ, “ಕಾರ್ಗಿಲ್ ವಿಜಯ್ ದಿವಸ್ ಸಶಸ್ತ್ರ ಪಡೆಗಳ ಅಸಾಧಾರಣ ಶೌರ್ಯ ಮತ್ತು ನಿರ್ಣಯದ ಸಂಕೇತವಾಗಿದೆ. ಎಲ್ಲಾ ದೇಶವಾಸಿಗಳು ಸಶಸ್ತ್ರ ಪಡೆಗಳಿಗೆ ಮತ್ತು ಅವರ ಕುಟುಂಬ ಸದಸ್ಯರಿಗೆ ಯಾವಾಗಲೂ ಋಣಿಯಾಗಿರುತ್ತಾರೆ” ಎಂದಿದ್ದಾರೆ.

ಉಪರಾಷ್ಟ್ರಪತಿ ಎಂ ವೆಂಕಯ್ಯ ನಾಯ್ಡು ಅವರು ಕೂಡ 1999 ರ ಈ ದಿನ ರಾಷ್ಟ್ರವನ್ನು ರಕ್ಷಿಸುವಲ್ಲಿ ಅಚಲವಾದ ದೇಶಭಕ್ತಿ ಮತ್ತು ಸಾಟಿಯಿಲ್ಲದ ಶೌರ್ಯವನ್ನು ಪ್ರದರ್ಶಿಸಿದ ಧೀರ ಸೈನಿಕರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಕಾರ್ಗಿಲ್‌ನಲ್ಲಿ ಹುತಾತ್ಮರಾದವರ ಅತ್ಯುನ್ನತ ತ್ಯಾಗಕ್ಕಾಗಿ ರಾಷ್ಟ್ರವು ಎಂದಿಗೂ ಋಣಿಯಾಗಿದೆ ಎಂದಿದ್ದಾರೆ.

ಕಾರ್ಗಿಲ್ ವಿಜಯ್ ದಿವಸ್‌ನಲ್ಲಿ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ತ್ಯಾಗಕ್ಕೆ ಭಾರತ ವಂದನೆ ಸಲ್ಲಿಸುತ್ತದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಅವರು ನಮ್ಮ ಮಾತೃಭೂಮಿಯನ್ನು ರಕ್ಷಿಸಲು ಅತ್ಯಂತ ಕಠಿಣ ಪರಿಸ್ಥಿತಿಗಳಲ್ಲಿ ವೀರಾವೇಶದಿಂದ ಹೋರಾಡಿದರು. ಅವರ ಶೌರ್ಯ ಮತ್ತು ಅದಮ್ಯ ಮನೋಭಾವವು ಭಾರತದ ಇತಿಹಾಸದಲ್ಲಿ ನಿರ್ಣಾಯಕ ಕ್ಷಣವಾಗಿ ಶಾಶ್ವತವಾಗಿ ಉಳಿಯುತ್ತದೆ ಎಂದು ಸಿಂಗ್ ಹೇಳಿದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top