News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಾನ್ಸೂನ್‌ ಅಧಿವೇಶನ: ಇಂದು 19 ರಾಜ್ಯಸಭಾ ಸಂಸದರ ಅಮಾನತು

ನವದೆಹಲಿ: ಇಂದಿನ ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ 19 ವಿರೋಧ ಪಕ್ಷಗಳ ಸಂಸದರನ್ನು ರಾಜ್ಯಸಭೆಯಿಂದ ಒಂದು ವಾರದವರೆಗೆ ಅಮಾನತು ಮಾಡಲಾಗಿದೆ.

“ರಾಜ್ಯಸಭೆಯಿಂದ ವಿರೋಧ ಪಕ್ಷದ ಸಂಸದರನ್ನು ಅಮಾನತುಗೊಳಿಸುವ ನಿರ್ಧಾರವನ್ನು ಭಾರವಾದ ಹೃದಯದಿಂದ ತೆಗೆದುಕೊಳ್ಳಲಾಗಿದೆ. ಅವರು ಸಭಾಪತಿಯ ಮನವಿಗಳನ್ನು ನಿರ್ಲಕ್ಷಿಸುತ್ತಲೇ ಇದ್ದರು” ಎಂದು ಬಿಜೆಪಿಯ ಪಿಯೂಷ್ ಗೋಯಲ್ ಹೇಳಿದ್ದಾರೆ.

“ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಚೇತರಿಸಿಕೊಂಡು ಸಂಸತ್ತಿಗೆ ಮರಳಿದ ನಂತರ ಬೆಲೆ ಏರಿಕೆ ಕುರಿತು ಚರ್ಚೆಗೆ ಸರ್ಕಾರ ಸಿದ್ಧವಾಗಿದೆ” ಎಂದು ಅವರು ಹೇಳಿದ್ದಾರೆ.

ಸ್ಪೀಕರ್ ಓಂ ಬಿರ್ಲಾ ಅವರು ಅನುಚಿತವಾಗಿ ವರ್ತಿಸದಂತೆ ಎಚ್ಚರಿಕೆ ನೀಡಿದರೂ ಸದನದೊಳಗೆ ಭಿತ್ತಿಪತ್ರಗಳನ್ನು ಹಿಡಿದಿದ್ದಕ್ಕಾಗಿ ಲೋಕಸಭೆಯಲ್ಲಿ ನಾಲ್ವರು ಕಾಂಗ್ರೆಸ್ ಸಂಸದರು ಆಗಸ್ಟ್ 12 ಕ್ಕೆ ಕೊನೆಗೊಳ್ಳುವ ಸಂಪೂರ್ಣ ಮುಂಗಾರು ಅಧಿವೇಶನದಿಂದ ಅಮಾನತುಗೊಂಡ ಮರುದಿನವೇ ಇಂದು ರಾಜ್ಯಸಭೆಯ 19 ಸಂಸದರನ್ನು ಅಮಾನತು ಮಾಡಲಾಗಿದೆ.

ಅಮಾನತುಗೊಂಡ ವಿಪಕ್ಷ ಸಂಸದರು ಕಲಾಪವನ್ನು ನಡೆಸಲು ಬಿಡದೆ ಪ್ರತಿಭಟನೆ ಮುಂದುವರಿಸಿದ ಹಿನ್ನೆಲೆಯಲ್ಲಿ ಇಂದು ಕಲಾಪವನ್ನು ಒಂದು ಗಂಟೆ ಮುಂದೂಡಲಾಯಿತು.

ಅಮಾನತುಗೊಂಡ ಸಂಸದರು ಡಿಎಂಕೆ, ಟಿಆರ್‌ಎಸ್‌, ಟಿಎಂಸಿ ಪಕ್ಷಗಳಿಗೆ ಸೇರಿದವರಾಗಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top