News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಶ್ರೀಲಂಕಾದ ಆರ್ಥಿಕ ಸ್ಥಿರತೆ, ಚೇತರಿಕೆಗೆ ಭಾರತದ ನೆರವು ನಿರಂತರ: ಮೋದಿ

ಕೊಲಂಬೊ: ಶ್ರೀಲಂಕಾದ ನೂತನ ಅಧ್ಯಕ್ಷ ರಾನಿಲ್ ವಿಕ್ರಮಸಿಂಘೆ ಅವರನ್ನು ಅಭಿನಂದಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಸ್ಥಾಪಿತ ಪ್ರಜಾಸತ್ತಾತ್ಮಕ ವಿಧಾನಗಳ ಮೂಲಕ ಸ್ಥಿರತೆ ಮತ್ತು ಆರ್ಥಿಕ ಚೇತರಿಕೆಗಾಗಿ ದ್ವೀಪ ರಾಷ್ಟ್ರದ ಜನರ ಪ್ರಯತ್ನಕ್ಕೆ ಭಾರತ ಬೆಂಬಲ ನೀಡುವುದನ್ನು ಮುಂದುವರಿಸುತ್ತದೆ ಎಂದು ಹೇಳಿದ್ದಾರೆ.

ವಿಕ್ರಮಸಿಂಘೆ ಅವರಿಗೆ ಮೋದಿ ಕಳುಹಿಸಿರುವ ಅಭಿನಂದನಾ ಪತ್ರವನ್ನು ಶ್ರೀಲಂಕಾದಲ್ಲಿನ ಭಾರತೀಯ ಹೈಕಮಿಷನ್ ಇಂದು ಟ್ವಿಟ್‌ ಮಾಡಿದೆ

ಜನರ ಪರಸ್ಪರ ಪ್ರಯೋಜನಕ್ಕಾಗಿ ಮತ್ತು ಭಾರತ ಮತ್ತು ಶ್ರೀಲಂಕಾ ನಡುವಿನ ಹಳೆಯ, ನಿಕಟ ಮತ್ತು ಸೌಹಾರ್ದ ಸಂಬಂಧಗಳನ್ನು ಬಲಪಡಿಸಲು ಶ್ರೀಲಂಕಾ ಅಧ್ಯಕ್ಷರೊಂದಿಗೆ ನಿಕಟವಾಗಿ ಕೆಲಸ ಮಾಡಲು ಎದುರು ನೋಡುತ್ತಿದ್ದೇನೆ ಎಂದು ಪ್ರಧಾನಮಂತ್ರಿ ಪತ್ರದಲ್ಲಿ ತಿಳಿಸಿದ್ದಾರೆ.

73 ವರ್ಷದ ವಿಕ್ರಮಸಿಂಘೆ ಅವರು ಶಾಸಕರಿಂದ ಆಯ್ಕೆಯಾದ ನಂತರ ಶ್ರೀಲಂಕಾದ ಎಂಟನೇ ಅಧ್ಯಕ್ಷರಾಗಿ ಕಳೆದ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕೊಲಂಬೊದಲ್ಲಿ ಇಂದು ಭಾರತೀಯ ಹೈಕಮಿಷನರ್ ಗೋಪಾಲ್ ಬಾಗ್ಲೇ ಅವರು ಹೊಸದಾಗಿ ನೇಮಕಗೊಂಡ ಪ್ರಧಾನಿ ದಿನೇಶ್ ಗುಣವರ್ಧನ ಅವರನ್ನು ಭೇಟಿ ಮಾಡಿದರು ಮತ್ತು ಭಾರತದ ನಾಯಕತ್ವ, ಸರ್ಕಾರ ಮತ್ತು  ಜನರ ಶುಭಾಶಯಗಳನ್ನು ಅವರಿಗೆ ತಿಳಿಸಿದರು.

ಈ ವರ್ಷದ ಜನವರಿಯಿಂದ ಶ್ರೀಲಂಕಾಕ್ಕೆ ಭಾರತ ಸರ್ಕಾರದ ನೆರವು ಸುಮಾರು USD 4 ಶತಕೋಟಿ ತಲುಪಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top