ಮೈಸೂರು: ಮೈಸೂರು- ತಾಳೆಗುಪ್ಪ ರೈಲಿಗೆ ಕುವೆಂಪು ಅವರ ಹೆಸರನ್ನು ಇಡುವಂತೆ ಮೈಸೂರು ಸಂಸದ ಪ್ರತಾಪ್ ಸಿಂಹ ಅವರು ಕೇಂದ್ರ ರೈಲ್ವೆ ಸಚರಿಗೆ ಮನವಿ ಮಾಡಿದ್ದಾರೆ.
ಮಂಗಳವಾರ ಕೇಂದ್ರ ರೈಲ್ವೆ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾದ ಪ್ರತಾಪ್ ಸಿಂಹ ಅವರು, ರೈಲ್ವೇ ಸಂಪರ್ಕಗಳಿಗೆ ಸಂಬಂಧಿಸಿದಂತೆ ಹಲವು ಮನವಿಗಳನ್ನು ಸಲ್ಲಿಸಿದರು.
ಮೈಸೂರಿನ ಅಭಿವೃದ್ಧಿ ದೃಷ್ಟಿಯಿಂದ ಹಾಲಿ ಬೆಂಗಳೂರು-ಮುಂಬೈ ಉದ್ಯಾನ್ ಎಕ್ಸ್ ಪ್ರೆಸ್ ರೈಲನ್ನು ಮೈಸೂರಿಗೆ ವಿಸ್ತರಿಸುವಂತೆ ಅವರು ಮನವಿ ಮಾಡಿದರು. ಮೈಸೂರು-ತಾಳೆಗುಪ್ಪ ಎಕ್ಸ್ಪ್ರೆಸ್ ರೈಲಿಗೆ ಕುವೆಂಪು ಎಕ್ಸ್ಪ್ರೆಸ್ ಎಂದು ನಾಮಕರಣ ಮಾಡುವಂತೆ ಮನವಿ ಸಲ್ಲಿಸಿದರು.
ಅಲ್ಲದೇ ನೈರುತ್ಯ ರೈಲ್ವೆಯ ನೇಮಕಾತಿ ಸಂದರ್ಭದಲ್ಲಿ ಕ್ರೀಡಾಕೂಟದಡಿ ಕರ್ನಾಟಕದ ಮಹಿಳಾ ಹಾಕಿ ತಂಡವನ್ನು ಪ್ರತಿನಿಧಿಸುವ ಮಹಿಳಾ ಕ್ರೀಡಾಪಟುಗಳನ್ನು ಪರಿಗಣಿಸುವಂತೆ ಪ್ರತಾಪ್ ಸಿಂಹ ಅವರು ರೈಲ್ವೆ ಸಚಿವರಿಗೆ ಮನವಿ ಮಾಡಿದ್ದಾರೆ.
ತಮ್ಮ ಎಲ್ಲ ಬೇಡಿಕೆಗಳಿಗೆ ರೈಲ್ವೆ ಸಚಿವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದ್ದಾರೆ.
Just met Hon.RM @AshwiniVaishnaw ji and requested him to approve the DPR (Mys Yard n Naganahally MEMU shed), Extend Udyan Express to Mys, Increase the frequency from 3 days to all 7 days between Mys n Karwar. pic.twitter.com/FZeFuZNoDT
— Pratap Simha (@mepratap) July 26, 2022
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.