News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಬ್ದುಲ್‌ ಕಲಾಂ ಪುಣ್ಯತಿಥಿ: ಗಣ್ಯರಿಂದ ಸ್ಮರಣೆ

ನವದೆಹಲಿ: ಇಂದು ಮಾಜಿ ರಾಷ್ಟ್ರಪತಿ ಮತ್ತು ಖ್ಯಾತ ವಿಜ್ಞಾನಿ ಭಾರತರತ್ನ ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರ 7ನೇ ಪುಣ್ಯತಿಥಿ. ಭಾರತದ ಕ್ಷಿಪಣಿ ಮನುಷ್ಯ ಎಂದು ಜನಪ್ರಿಯವಾಗಿ ಕರೆಯಲ್ಪಡುವ ಡಾ.ಕಲಾಂ ಅವರು ಸಾರ್ವಕಾಲಿಕ ಶ್ರೇಷ್ಠ ಶಿಕ್ಷಕರಲ್ಲಿ ಒಬ್ಬರಾಗಿದ್ದರು ಮತ್ತು ಭಾರತದ ರಕ್ಷಣಾ ಮತ್ತು ಬಾಹ್ಯಾಕಾಶ ಸಂಶೋಧನೆ ಅಭಿವೃದ್ಧಿಯಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದಾರೆ.

ಕಲಾಂ ಅವರಿಗೆ ಇಂದು ಶ್ರದ್ಧಾಂಜಲಿ ಸಲ್ಲಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಭಾರತವನ್ನು ಬಲಿಷ್ಠ ರಾಷ್ಟ್ರವನ್ನಾಗಿ ಮಾಡಲು ಕಲಾಂ ಅವರ ಇಡೀ ಜೀವನ ಮುಡಿಪಾಗಿತ್ತು. ತಮ್ಮ ಜ್ಞಾನ ಮತ್ತು ಸರಳತೆಯಿಂದ ಅವರು ದೇಶದ ಯುವಜನತೆಗೆ ಸ್ಫೂರ್ತಿ ನೀಡಿದರು. ಕಲಾಂ ಅವರ ಚಿಂತನೆಗಳು ಮತ್ತು ಆದರ್ಶಗಳು ದೇಶವಾಸಿಗಳಿಗೆ ಸದಾ ಮಾರ್ಗದರ್ಶನ ನೀಡುತ್ತವೆ ಎಂದು ಹೇಳಿದರು.

ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿ, ಡಾ.ಎ.ಪಿ.ಜೆ.ಅಬ್ದುಲ್ ಕಲಾಂ ಅವರು ಜ್ಞಾನ, ವಿನಮ್ರತೆ ಮತ್ತು ಭವಿಷ್ಯದ ದೃಷ್ಟಿಯ ಪ್ರತಿರೂಪವಾಗಿದ್ದರು. ಭಾರತವನ್ನು ಸ್ವಾವಲಂಬಿ ರಾಷ್ಟ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಅಪ್ರತಿಮ ಭಕ್ತಿ ಹೊಂದಿದ್ದ ಡಾ.ಕಲಾಂ ಅವರು ‘ಅಜಾತಶತ್ರು’ ಎಂದು ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top