News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದ್ರೌಪದಿ ಮುರ್ಮುಗೆ ಅವಮಾನಿಸಿದ ಅಧೀರ್‌ ರಂಜನ್‌ ಚೌಧರಿ: ಬಿಜೆಪಿ ವಾಗ್ದಾಳಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರ ಪತ್ನಿ ಎಂದು ಸಂಭೋದಿಸುವ ಮೂಲಕ ಅವಹೇಳನ ಮಾಡಿದ ಕಾಂಗ್ರೆಸ್ ಲೋಕಸಭಾ ನಾಯಕ ಅಧಿರ್ ರಂಜನ್ ಚೌಧರಿ ವಿರುದ್ಧ ಬಿಜೆಪಿ ವಾಕ್ ಧಪ್ರಹಾರ ನಡೆಸಿದೆ.

“ಬುಡಕಟ್ಟು ಸಮುದಾಯದ ಬಡ ಕುಟುಂಬದಿಂದ ಬಂದು ಇತಿಹಾಸವನ್ನು ರಚಿಸಿರುವ ದ್ರೌಪದಿ ಮುರ್ಮು ಅವರನ್ನು ಕಾಂಗ್ರೆಸ್ ಪಕ್ಷ ನಿರಂತರವಾಗಿ ಅವಮಾನ ಮಾಡುತ್ತಿದೆ” ಇಂದು ಸ್ಮೃತಿ ಇರಾನಿ ಆರೋಪಿಸಿದ್ದಾರೆ.

ಕಾಂಗ್ರೆಸ್ಸಿಗರು ದ್ರೌಪದಿ ಮುರ್ಮು ಅವರನ್ನು ಕೈ ಗೊಂಬೆ ಮತ್ತು ದುಷ್ಟತನದ ಸಂಕೇತ ಎಂದೆಲ್ಲಾ ಅವಮಾನಿಸಿದ್ದರು. ಈಗ ರಾಷ್ಟ್ರ ಪತ್ನಿ ಎಂದು ಕರೆಯುವ ಮೂಲಕ ಮತ್ತೊಮ್ಮೆ ಅವಮಾನ ಮಾಡಿದ್ದಾರೆ. ಅಧೀರ್ ರಂಜನ್ ಚೌಧರಿ ಅವರು ಉದ್ದೇಶಪೂರ್ವಕವಾಗಿ ಮುರ್ಮು ಅವರನ್ನು ಈ ರೀತಿ ಕರೆದಿದ್ದಾರೆ ಎಂದು ಇರಾನಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಸೋನಿಯಾ ಗಾಂಧಿ ಅವರ ನಾಯಕತ್ವದಲ್ಲಿ ಕಾಂಗ್ರೆಸ್ಸಿಗರು ಸಂವಿಧಾನಿಕ ಹುದ್ದೆಯಲ್ಲಿರುವ ಮಹಿಳೆಯನ್ನು ಅವಮಾನಿಸುತ್ತಿದ್ದಾರೆ. ದೇಶದ ಮೊದಲ ಬುಡಕಟ್ಟು ಮಹಿಳಾ ರಾಷ್ಟ್ರಪತಿಗೆ ಅವಮಾನ ಮಾಡಿದವರು ಈ ಕ್ಷಣವೇ ಸಂಸತ್ತಿನ ಮುಂದೆ ಮತ್ತು ಭಾರತದ ಬೀದಿ ಬೀದಿಗಳಲ್ಲಿ ಕ್ಷಮೆಯಾಚನೆ ಮಾಡಬೇಕು” ಎಂದು ಅವರು ಆಗ್ರಹಿಸಿದ್ದಾರೆ.

ನಿರ್ಮಲಾ ಸೀತಾರಾಮನ್‌ ಮತ್ತು ಪಿಯೂಶ್‌ ಗೋಯಲ್‌ ಅವರು ಕೂಡ ಚೌಧರಿ ಧೋರಣೆಯನ್ನು ಖಂಡಿಸಿದ್ದು, ಬುಡಕಟ್ಟು ಸಮುದಾಯದ ಜನರಿಗೆ ಅವಮಾನಿಸಿದು ಕಾಂಗ್ರೆಸ್‌ ಚಾಳಿ ಎಂದು ಆರೋಪಿಸಿದ್ದಾರೆ.

 

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top