News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಛತ್ತೀಸ್‌ಗಢ: ಮೋಸ್ಟ್‌ ವಾಟೆಂಡ್‌ ನಕ್ಸಲನ ಸಂಹಾರ

ರಾಯ್‌ಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಮೋಸ್ಟ್‌ ವಾಟೆಂಡ್‌ ನಕ್ಸಲ ಕೊಲ್ಲಲ್ಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತಪಟ್ಟ ನಕ್ಸಲನನ್ನು ರಾಕೇಶ್ ಮಡ್ಕಮ್ ಎಂದು ಗುರುತಿಸಲಾಗಿದೆ. ಈತನ ಮೇಲೆ 5 ಲಕ್ಷ ರೂಪಾಯಿ ಬಹುಮಾನವನ್ನು ಘೋಷಿಸಲಾಗಿತ್ತು. ಮಾವೋವಾದಿಗಳ ಕಟೆಕಲ್ಯಾಣ ಪ್ರದೇಶ ಸಮಿತಿಯ ಸದಸ್ಯನಾಗಿ ಈತ ಸಕ್ರಿಯನಾಗಿದ್ದ ಎನ್ನಲಾಗಿದೆ.

ನೆರೆಯ ದಾಂತೇವಾಡ ಜಿಲ್ಲೆಯ ಜಿಲ್ಲಾ ಮೀಸಲು ಪಡೆ (ಡಿಆರ್‌ಜಿ) ತಂಡವು ಅಂತರ-ಜಿಲ್ಲಾ ಗಡಿಯಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಬಿಂದ್ರಪಾಣಿ ಗ್ರಾಮದ ಬಳಿಯ ಕಾಡಿನಲ್ಲಿ ಇಂದು ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕಾರ್ಯಾಚರಣೆಯ ಸಂದರ್ಭದಲ್ಲಿ, ಭದ್ರತಾ ಪಡೆಗಳು ಮತ್ತು ಕೆಲವು ನಕ್ಸಲರ ನಡುವೆ ಎರಡು ಬಾರಿ ಮುಖಾಮುಖಿ ಸಂಭವಿಸಿದೆ. ಬಳಿಕ ನಕ್ಸಲ್‌ ಮೃತಪಟ್ಟಿದ್ದು, ಆತನ ದೇಹವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿವೆ.

ನಿರ್ದಿಷ್ಟ ಮಾಹಿತಿಯ ಮೇರೆಗೆ ಗಸ್ತು ತಂಡವು ಗುರುವಾರ ರಾತ್ರಿ ಅಂತರ್ ಜಿಲ್ಲಾ ಗಡಿಯಲ್ಲಿರುವ ಕಾಡಿನಲ್ಲಿ ಕಾರ್ಯಾಚರಣೆಯನ್ನು ಪ್ರಾರಂಭಿಸಿತು, ಈ ಸಂದರ್ಭದಲ್ಲಿ ದಂತೇವಾಡದ ಅರಣ್ಯದಲ್ಲಿ ಎರಡು ಕಡೆಯ ನಡುವೆ ಗುಂಡಿನ ಚಕಮಕಿ ನಡೆಯಿತು ಎಂದು ಮೂಲಗಳು ತಿಳಿಸಿವೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top