News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮ: ಸಿಎಂ

ಬೆಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ವಿಶೇಷ ಪೊಲೀಸ್ ಕ್ರಮಗಳನ್ನು ತೆಗೆದುಕೊಳ್ಳಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಅವರು ಇಂದು ತಮ್ಮ ಆರ್.ಟಿ.ನಗರದ ನಿವಾಸದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು.

ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಪ್ರದೇಶದಲ್ಲಿ ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳುವ ಸಂಬಂಧ ಇಂದು ಪೊಲೀಸ್ ಹಿರಿಯ ಅಧಿಕಾರಿಗಳೊಂದಿಗೆ ಉನ್ನತ ಮಟ್ಟದ ಸಭೆಯನ್ನು ನಡೆಸಲಾಗುವುದು. ಕೇರಳ ಗಡಿ ಭಾಗದಲ್ಲಿ 55 ರಸ್ತೆಗಳನ್ನು ನಿಭಾಯಿಸುವುದು, ನಿರ್ಬಂಧ ಹೇರಿಕೆ ಸೇರಿದಂತೆ ಪ್ರಮುಖ ತೀರ್ಮಾನಗಳ ಬಗ್ಗ್ಗೆ ಸಭೆಯಲ್ಲಿ ಚರ್ಚಿಸಲಾಗುವುದು ಎಂದರು.

ಪ್ರವೀಣ್ ಅವರ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತ್ತೊಂದು ಕೊಲೆಯ ಮಾಹಿತಿ ಬಂದಿದೆ. ಮೂರು ಕೊಲೆಯ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ. ಪ್ರತಿಯೊಬ್ಬ ನಾಗರೀಕನ ಜೀವವೂ ಸರ್ಕಾರಕ್ಕೆ ಮುಖ್ಯ. ತನಿಖೆ ನಡೆಯುತ್ತಿದೆ. ಮೂರು ಕೊಲೆಗಳಾಗಿರುವುದು ಜನರಲ್ಲಿ ಆತಂಕವನ್ನು ಮೂಡಿಸಿರುವುದು ಸಹಜ. ಸಮಾಜದಲ್ಲಿ ಇಂತಹ ಘಟನೆಗಳು ನಡೆಯಬಾರದು. ಸಮಾಜಘಾತುಕ ಶಕ್ತಿಗಳಿಗೆ ಕುಮ್ಮಕ್ಕು ನೀಡಲಾಗಿದೆ. ರಾಜಕೀಯ ಪ್ರೇರಣೆ ಕೂಡ ಇದರ ಹಿಂದಿದೆ. ಇದರಲ್ಲಿ ಹಲವು ಆಯಾಮಗಳಿವೆ. ಇವೆಲ್ಲಗಳನ್ನು ನಿಗ್ರಹಿಸಲು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದೇವೆ ಎಂದರು.

ಮಸೂದ್ ಕೊಲೆಯ ಅರೋಪಿಗಳನ್ನು ದಸ್ತಗಿರಿ ಮಾಡಲಾಗಿದೆ. ಇನ್ನೆರಡು ಕೊಲೆ ಪ್ರಕರಣದಲ್ಲಿ ಆರೋಪಿಗಳನ್ನು ಪತ್ತೆ ಹಚ್ಚಲಾಗುತ್ತಿದೆ. ಸರ್ಕಾರ ಈ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸುತ್ತಿದೆ. ಅದರ ಹಿಂದೆ ದೊಡ್ಡ ಸಂಘಟನೆಗಳಿವೆ. ಇದು ಕೇವಲ ಕೊಲೆ ಎಂದು ಪರಿಗಣಿಸಲಾಗುತ್ತಿಲ್ಲ. ಇದೊಂದು ಯೋಜನಾಬದ್ಧ ದುಷ್ಕøತ್ಯವಾಗಿದ್ದು, ಇದರ ಹಿಂದಿರುವ ಸಮಾಜಘಾತುಕ ಸಂಘಟನೆಗಳನ್ನು ಸದೆಬಡೆಯುವ ಮಹತ್ವದ ಕೆಲಸವನ್ನು ಮಾಡಲಾಗುತ್ತಿದೆ. ಇನ್ನು ಕೆಲವೇ ದಿನಗಳಲ್ಲಿ ಈ ಕ್ರಮಗಳು ಜನರಿಗೆ ವೇದ್ಯವಾಗಲಿದೆ ಎಂದರು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top